Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣ

---Advertisement---

 

ಚಿತ್ರದುರ್ಗ, ಫೆಬ್ರವರಿ.01 : ಪಂಚಗ್ಯಾರಂಟಿ ಯೋಜನೆಗಳನ್ನು ಕೇವಲ ಚುನಾವಣೆ ಪ್ರಚಾರಕ್ಕಾಗಿ ಜಾರಿ ಮಾಡಿಲ್ಲ. ರಾಜ್ಯದ ಜನರ ಅಭಿವೃದ್ಧಿ ದೂರದೃಷ್ಠಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ.  ರಾಜ್ಯ ಸರ್ಕಾರ ಜನಪರ ಯೋಜನೆಗಳ ಜಾರಿಗೆ ಸದಾ ಬದ್ದವಾಗಿರುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿದರು.

ಶನಿವಾರ ನಗರದ ಜಿ.ಪಂ. ಕಚೇರಿ ಆವರಣದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ನೂತನ ಕಚೇರಿಯನ್ನು ಉದ್ಘಾಟಿಸಿ, ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮ ದೇಶದ ಬಡವರ ಜೀವನದಲ್ಲಿ ಸಾಕಷ್ಟು ಬದಲಾವಣೆ ತಂದಿತು. ಇವರ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ರಕ್ತಕ್ರಾಂತಿ ಇಲ್ಲದೆಯೇ ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಜಾರಿ ಮಾಡಿ, ಭೂ ರಹಿತರಿಗೆ ಭೂಮಿ ಹಕ್ಕು ದೊರಕಿಸಿಕೊಟ್ಟರು. ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರು ರಾಜ್ಯದ ಪದವಿಧರರಿಗೆ ಸರ್ಕಾರಿ ನೌಕರಿ ದೊರಯುವಂತೆ ಮಾಡಿದರು. ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರು ಜಾರಿ ಮಾಡಿದ ಸಿಇಟಿ ಪದ್ದತಿ, ಬಡವರ ಮಕ್ಕಳಿಗೆ  ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಲಭಿಸುವಂತೆ ಮಾಡಿತು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ರೈತರ ಜಮೀನಿನಲ್ಲಿರುವ 10 ಹೆಚ್.ಪಿ. ಮೋಟಾರಿನ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಿದರು. ಸಿದ್ಧರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಜಾರಿ ಮಾಡಿದರು. ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಇದರಿಂದ ಅವರನ್ನು ಭಾಗ್ಯಗಳ ರಾಜ ಎಂದು ಕರೆಯಲಾಗುತ್ತಿದೆ. ನಮ್ಮ ಪಕ್ಷದ ಸರ್ಕಾರಗಳು ಜನರ ಜೀವನದಲ್ಲಿ ಮಹತ್ವದ ಬದಲಾವಣೆ ತರುವಂತಹ ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ, ಮನೆ ರಹಿತರಿಗೆ ಮನೆ ಸೇರಿದಂತೆ ನೂರಾರು ಯೋಜನೆಗಳನ್ನು ಜಾರಿ ಮಾಡಿವೆ ಎಂದರು.

ರಾಜ್ಯದಲ್ಲಿ ಶಕ್ತಿ ಯೋಜನೆಯಡಿ 377 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ರೂ.9,124 ಕೋಟಿ ಖರ್ಚು ಮಾಡಿದೆ.  ಗೃಹಲಕ್ಷ್ಮೀ ಯೋಜನೆಯಡಿ 1.2 ಕೋಟಿ ಮಹಿಳೆಯರು ನೊಂದಣಿಯಾಗಿದ್ದು, ಇವರಿಗೆ ಪ್ರತಿ ಮಾಹೆ ರೂ.2000 ಹಣವನ್ನು ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಇದಕ್ಕಾಗಿ ರೂ.35,608 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಗೃಹಜ್ಯೋತಿ ರಾಜ್ಯದ ಎಲ್ಲ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕಾಗಿ ರೂ.11,810 ಕೋಟಿ ವ್ಯಯಿಸಲಾಗಿದೆ. ಯುವನಿಧಿ ಯೋಜನೆಯಡಿ 2.14 ಲಕ್ಷ ಫಲಾನುಭವಿಗಳಿಗೆ ರೂ.222 ಕೋಟಿ ಹಣ ನೀಡಲಾಗಿದೆ ಎಂದು ಹೆಚ್.ಎಂ.ರೇವಣ್ಣ ಮಾಹಿತಿ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment