ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ: ವೈದ್ಯರನ್ನು ನಂಬುವಷ್ಟು ಜನ ದೇವರನ್ನು ನಂಬುವುದಿಲ್ಲವೇನೊ. ಇಂಥ ವೈದ್ಯರು ಸಾವು ಬದುಕಿನ ನಡುವೆ ಹೋರಾಡುವ ರೋಗಿಗಳ ಕಡೆ ಗಮನ ಹರಿಸಿ, ಚಿಕಿತ್ಸೆ ನೀಡುವುದನ್ನು ಬಿಟ್ಟು, ತಮ್ಮದೇ ಸಮಸ್ಯೆಗಳಿಗೆ ರೋಗಿಗಳಿಗೆ ನರಕ ತೋರಿಸುತ್ತಿದ್ದಾರೆ. ವೈದ್ಯರಿಬ್ಬರು ಹಾದಿ ರಂಪ ಬೀದಿ ರಂಪ ಮಾಡಿಕೊಂಡು ಕೂತಿದ್ದಾರೆ. ಈ ಘಟನೆ ನಡೆದಿರೋದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಾಪುರ ಹೋಬಳಿಯ ಸರ್ಜಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ. ಇದು ಸಚಿವ ಡಾ.ಸುಧಾಕರ್ ಅವರ ಕ್ಷೇತ್ರವೂ ಹೌದು.
ಸದ್ಯ ರೋಗಿಗಳ ಕಡೆ ಗಮನ ಕೊಡದೆ ಒಬ್ಬರಿಗೊಬ್ಬರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುವವರು ಡಾ.ಚಂದ್ರಮೌಳಿ ಹಾಗೂ ಡಾ.ಹನುಮಂತರಾಯಪ್ಪ. ಈ ಇಬ್ಬರ ಮೇಲೆ ಸಾಕಷ್ಟು ದೂರುಗಳು ಸಹ ಇದಾವೆ. ಡಾ.ಹನುಮಂತರಾಯಪ್ಪ ರೋಗಿಗಳ ಮೇಲೆ ಹಲ್ಲೆ ಮಾಡಿ ಹುಚ್ಚಾಟ ಮೆರೆದರೆ ಅತ್ತ ಡಾ.ಚಂದ್ರಮೌಳಿ ಕುಡಿದು ಬಂದು ಡ್ಯೂಟಿ ಮಾಡುತ್ತಿದ್ದಾರೆ. ರೋಗಿಗಳು ಇವರಿಬ್ಬರ ವರ್ತನೆಯಿಂದ ಬೇಸತ್ತು ಹೋಗಿದ್ದಾರೆ.
ಡಾ.ಚಂದ್ರಮೌಳಿಯ ಕುಡಿತದ ಅವತಾರವನ್ನು ಸಾರ್ವಜನಿಕರು ವಿಡಿಯೋ ಮಾಡಿ, ಮೇಲಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆದರೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹೀಗಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿಗಳು ಚಿಕಿತ್ಸೆಗೆಂದು ರಾತ್ರಿ ಸಮಯದಲ್ಲಿ ಆಸ್ಪತ್ರೆಗೆ ಹೋದರೆ ಕುಡಿದೇ ಟ್ರೀಟ್ಮೆಂಟ್ ನೀಡುತ್ತಾರೆ ಎಂಬ ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ಇದರಿಂದ ಸಂಬಂಧಪಟ್ಟವರು ಮೊದಲು ಅಮಾನತು ಮಾಡಿ. ಆ ಇಬ್ಬರು ವೈದ್ಯರು ಆಸ್ಪತ್ರೆಯಲ್ಲಿರಬಾರದೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಯಾವುದೇ ಸಣ್ಣ ಪುಟ್ಟ ಕಾಯಿಲೆಯಾಗಲಿ, ದೊಡ್ಡ ದೊಡ್ಡ ಕಾಯಿಲೆಯಾಗಲೀ ವೈದ್ಯರು ಬದುಕಿಸುತ್ತಾರೆಂಭ ನಂಬಿಕೆಯಿಂದ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಹೀಗೆ ಕುಡಿದು ಚಿಕಿತ್ಸೆ ನೀಡಿದರೆ ಜನ ತಮ್ಮ ಜೀವದ ಬಗ್ಗೆ ಆತಂಕಗೊಳ್ಳುವುದಿಲ್ಲವಾ..?

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್