ಚಿತ್ರದುರ್ಗ: ವೈದ್ಯರನ್ನು ನಂಬುವಷ್ಟು ಜನ ದೇವರನ್ನು ನಂಬುವುದಿಲ್ಲವೇನೊ. ಇಂಥ ವೈದ್ಯರು ಸಾವು ಬದುಕಿನ ನಡುವೆ ಹೋರಾಡುವ ರೋಗಿಗಳ ಕಡೆ ಗಮನ ಹರಿಸಿ, ಚಿಕಿತ್ಸೆ ನೀಡುವುದನ್ನು ಬಿಟ್ಟು, ತಮ್ಮದೇ ಸಮಸ್ಯೆಗಳಿಗೆ ರೋಗಿಗಳಿಗೆ ನರಕ ತೋರಿಸುತ್ತಿದ್ದಾರೆ. ವೈದ್ಯರಿಬ್ಬರು ಹಾದಿ ರಂಪ ಬೀದಿ ರಂಪ ಮಾಡಿಕೊಂಡು ಕೂತಿದ್ದಾರೆ. ಈ ಘಟನೆ ನಡೆದಿರೋದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಾಪುರ ಹೋಬಳಿಯ ಸರ್ಜಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ. ಇದು ಸಚಿವ ಡಾ.ಸುಧಾಕರ್ ಅವರ ಕ್ಷೇತ್ರವೂ ಹೌದು.
ಸದ್ಯ ರೋಗಿಗಳ ಕಡೆ ಗಮನ ಕೊಡದೆ ಒಬ್ಬರಿಗೊಬ್ಬರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುವವರು ಡಾ.ಚಂದ್ರಮೌಳಿ ಹಾಗೂ ಡಾ.ಹನುಮಂತರಾಯಪ್ಪ. ಈ ಇಬ್ಬರ ಮೇಲೆ ಸಾಕಷ್ಟು ದೂರುಗಳು ಸಹ ಇದಾವೆ. ಡಾ.ಹನುಮಂತರಾಯಪ್ಪ ರೋಗಿಗಳ ಮೇಲೆ ಹಲ್ಲೆ ಮಾಡಿ ಹುಚ್ಚಾಟ ಮೆರೆದರೆ ಅತ್ತ ಡಾ.ಚಂದ್ರಮೌಳಿ ಕುಡಿದು ಬಂದು ಡ್ಯೂಟಿ ಮಾಡುತ್ತಿದ್ದಾರೆ. ರೋಗಿಗಳು ಇವರಿಬ್ಬರ ವರ್ತನೆಯಿಂದ ಬೇಸತ್ತು ಹೋಗಿದ್ದಾರೆ.
ಡಾ.ಚಂದ್ರಮೌಳಿಯ ಕುಡಿತದ ಅವತಾರವನ್ನು ಸಾರ್ವಜನಿಕರು ವಿಡಿಯೋ ಮಾಡಿ, ಮೇಲಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆದರೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹೀಗಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿಗಳು ಚಿಕಿತ್ಸೆಗೆಂದು ರಾತ್ರಿ ಸಮಯದಲ್ಲಿ ಆಸ್ಪತ್ರೆಗೆ ಹೋದರೆ ಕುಡಿದೇ ಟ್ರೀಟ್ಮೆಂಟ್ ನೀಡುತ್ತಾರೆ ಎಂಬ ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ಇದರಿಂದ ಸಂಬಂಧಪಟ್ಟವರು ಮೊದಲು ಅಮಾನತು ಮಾಡಿ. ಆ ಇಬ್ಬರು ವೈದ್ಯರು ಆಸ್ಪತ್ರೆಯಲ್ಲಿರಬಾರದೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಯಾವುದೇ ಸಣ್ಣ ಪುಟ್ಟ ಕಾಯಿಲೆಯಾಗಲಿ, ದೊಡ್ಡ ದೊಡ್ಡ ಕಾಯಿಲೆಯಾಗಲೀ ವೈದ್ಯರು ಬದುಕಿಸುತ್ತಾರೆಂಭ ನಂಬಿಕೆಯಿಂದ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಹೀಗೆ ಕುಡಿದು ಚಿಕಿತ್ಸೆ ನೀಡಿದರೆ ಜನ ತಮ್ಮ ಜೀವದ ಬಗ್ಗೆ ಆತಂಕಗೊಳ್ಳುವುದಿಲ್ಲವಾ..?
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















