ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಕಿಡ್ನ್ಯಾಪ್ ಮಾಡಿದ್ರಾ..? : ಏನಿದು ಗ್ರಾ.ಪಂ ಮಾಜಿ ಅಧ್ಯಕ್ಷ ಕಿಡ್ನ್ಯಾಪ್ ಕೇಸ್..?

suddionenews
1 Min Read

ಬಾಗಲಕೋಟೆ: ಸಿನಿಮೀಯ ರೀತಿಯಲ್ಲಿ ಗ್ರಾಂ ಪಂಚಾಯತಿ ಮಾಜಿ ಅಧ್ಯಕ್ಷನ ಕಿಡ್ನಾಪ್ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಂಪಂ ಅಧ್ಯಕ್ಷ ಅಮರೇಶ್ ಮೇಟಿ ಅಪಹರಣಕ್ಕೊಳಗಾದ ಮಾಜಿ‌ ಅದ್ಯಕ್ಷರಾಗಿದ್ದಾರೆ. ಕಿಡ್ಬಾಪ್ ನ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದಿದ್ದಾರೆ.

ಅಮರೇಶ್ ಮೇಟಿ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕಾಂಗ್ರೆಸ್ ನವರಿಂದ ಅಪಹರಣವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮರಳು ಮಾಫಿಯಾ ಜನ ಹಾಗೂ ಬೀಳಗಿ ಕಾಂಗ್ರೆಸ್ ನವರಿಂದ ಅಪಹರಣವಾಗಿದೆ ಎನ್ನಲಾಗಿದೆ.

ಬಾಗಲಕೋಟೆ ಜಿಲ್ಲೆಯ ಬೀಳಗಿಯಿಂದ ದುಷ್ಕರ್ಮಿಗಳು, ಅಮರೇಶ್‌ ತಂಗಿದ್ದ ಲಾಡ್ಜ್ ಗೆ ತೆರಳಿ ಬಲವಂತವಾಗಿ ಹೊತ್ತೊಯ್ದಿದ್ದಾರೆ. ರಾಯಚೂರು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಬಸನಗೌಡ ಕಂಬಳಿ ಮೇಲೆ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬಸನಗೌಡ ಮತ್ತು ಸದಸ್ಯ ಲಕ್ಕಪ್ಪ ಎಂಬಾತನ ವಿರುದ್ದ ದೂರು ದಾಖಲಾಗಿದೆ. ಬೀಳಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇತ್ತ ಅಮರೇಶ್‌ ತಾಯಿ ಜೀವ ಬೆದರಿಕೆ ವಿಚಾರವಾಗಿ, ಲಿಂಗಸ್ಗೂರು ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *