ಜಿ.ಆರ್.ಲಕ್ಷ್ಮೀಕಾಂತ ರೆಡ್ಡಿ ನಿಧನ

suddionenews
0 Min Read

ಚಿತ್ರದುರ್ಗ, (ಫೆ.18) : ನಗರದ ಬಿ.ಎಲ್. ಗೌಡ ಲೇಔಟ್ ನಿವಾಸಿ ಜಿ.ಆರ್.ಲಕ್ಷ್ಮೀಕಾಂತ ರೆಡ್ಡಿ (63) ಗುರುವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

ಇವರಿಗೆ ಪತ್ನಿ, ಓರ್ವ ಹೆಣ್ಣು ಮಗಳು, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಸ್ವಗ್ರಾಮವಾದ ಹಳೇಕಲ್ಲಹಳ್ಳಿಯಲ್ಲಿ ಶುಕ್ರವಾರ ಸಂಜೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿ.ಆರ್.ಲಕ್ಷ್ಮೀಕಾಂತ ಅವರ ನಿಧನಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ಡಿ.ಟಿ. ವೆಂಕಟೇಶ್ ಅವರು ಸಂತಾಪ ಸೂಚಿಸಿದ್ದು, ಅವರ ಅಗಲಿಕೆಯ ದುಃಖವನ್ನು ಕುಟುಂಬದವರಿಗೆ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *