ಸೆಪ್ಟೆಂಬರ್ 20 ರಂದು ಬಿಟ್ಸ್ ಹೈಟೆಕ್ ಕಾಲೇಜಿನ ಪದವಿ ಪ್ರದಾನ ಸಮಾರಂಭ : ರವೀಂದ್ರ ಕೆ.ಬಿ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 17 : ಇಲ್ಲಿನ ತೋಟಗಾರಿಕಾ ಕಚೇರಿ ಸಮೀಪವಿರುವ ಬಿಟ್ಸ್ ಹೈಟೆಕ್ ಕಾಲೇಜಿನ ಪದವಿ ಪ್ರದಾನ ಸಮಾರಂಭ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಕ್ಕೆ ತ.ರಾ.ಸು.ರಂಗಮಂದಿರದಲ್ಲಿ ನಡೆಯಲಿದೆ ಎಂದು ಕಾಲೇಜಿನ ಸಂಸ್ಥಾಪಕ ರವೀಂದ್ರ ಕೆ.ಬಿ. ತಿಳಿಸಿದರು.

ಗುಲ್ಬರ್ಗ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ಎಸ್.ಆರ್.ನಿರಂಜನ ಸಮಾರಂಭ ಉದ್ಘಾಟಿಸುವರು.

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ.

ಅಪರಾಧಶಾಸ್ತ್ರ ವಿಶ್ರಾಂತ ಪ್ರಾಧ್ಯಾಪಕ ಡಾ.ನಟರಾಜ್, ಸರ್ಕಾರಿ ವಿಜ್ಞಾನ ಕಾಲೇಜು ಸ್ನಾತಕೋತ್ತರ ಗಣಿತ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗಟ್ಟಿ ಎನ್.ಬಿ. ಬಿಟ್ಸ್ ಹೈಟೆಕ್ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಕವಿತ ಬಿ.ಎಂ. ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.

2014 ರಲ್ಲಿ ನಮ್ಮ ಕಾಲೇಜು ಆರಂಭಗೊಂಡಿದ್ದು, ಕೊರೋನಾ ಸಂದರ್ಭದಲ್ಲಿ ಕೆಲವು ವರ್ಷಗಳ ಕಾಲ ಪದವಿ ಪ್ರದಾನ ಸಮಾರಂಭವಾಗಿರಲಿಲ್ಲ. ಹಾಗಾಗಿ ಈ ಬಾರಿಯ ಸಮಾರಂಭದಲ್ಲಿ 75 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುವುದೆಂದರು.

ಶುಲ್ಕ ಕಟ್ಟಲು ಆಗದಂತ ಬಡಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದೇವೆಲ್ಲದೆ ಕೆಲವರಿಗೆ ಲ್ಯಾಪ್‍ಟ್ಯಾಪ್‍ಗಳನ್ನು ಕೊಟ್ಟಿದ್ದೇವೆ. ಮೂಗ ಮತ್ತು ಕಿವುಡ ವಿದ್ಯಾರ್ಥಿನಿಯೊಬ್ಬಳಿಗೆ ನಮ್ಮ ಕಾಲೇಜಿನಲ್ಲಿ ಶಿಕ್ಷಣ ಕೊಟ್ಟಿದ್ದೇವೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳೆ ಹೆಚ್ಚು ನಮ್ಮ ಕಾಲೇಜಿನಲ್ಲಿ ಓದುತ್ತಿದ್ದಾರೆ. ಇಲ್ಲಿಯವರೆಗೂ ಮೂರು ಗೋಲ್ಡ್ ಮೆಡಲ್ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಅಪರಾಧಶಾಸ್ತ್ರ ವಿಶ್ರಾಂತ ಪ್ರಾಧ್ಯಾಪಕ ಡಾ.ನಟರಾಜ್ ಮಾತನಾಡಿ ಡೊನೇಷನ್ ಹಾವಳಿ ಹೆಚ್ಚಾಗಿರುವ ಇಂದಿನ ಕಾಲದಲ್ಲಿ ಬಿಟ್ಸ್ ಹೈಟೆಕ್ ಕಾಲೇಜು ವಿಭಿನ್ನವಾಗಿದೆ. ವಿಶ್ವವಿದ್ಯಾನಿಲಯಗಳು, ಸರ್ಕಾರಗಳೆ ವಿದ್ಯಾರ್ಥಿಗಳ ಗೋಳನ್ನು ಕೇಳದ ಇಂತಹ ಪರಿಸ್ಥಿತಿಯಲ್ಲಿ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ ಉದಾರತೆ ಮೆರೆಯುತ್ತಿರುವುದು ಸುಲಭದ ಮಾತಲ್ಲ ಎಂದು ಹೇಳಿದರು.

ಬಿಟ್ಸ್ ಹೈಟೆಕ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಕವಿತ ಜಿ.ಎಂ.ಮಾತನಾಡಿ ಪ್ರತಿ ವರ್ಷವೂ ನಮ್ಮ ಕಾಲೇಜಿಗೆ ಒಂದು ಇಲ್ಲವೇ ಎರಡು ರ್ಯಾಂಕ್‍ಗಳು ಬರುತ್ತಿವೆ. ಹಣಕ್ಕಿಂತ ಮುಖ್ಯವಾಗಿ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಉದ್ದೇಶ ಎಂದರು.

 

suddionenews

Recent Posts

ಬೆಂಡೆಕಾಯಿ – ನಿಂಬೆ ರಸದ ಅದ್ಭುತ ಆರೋಗ್ಯ ಪ್ರಯೋಜನಗಳೇನು ಗೊತ್ತಾ ?

ಸುದ್ದಿಒನ್ : ಬೆಳಿಗ್ಗೆ ಬೆಂಡೆಕಾಯಿ-ನಿಂಬೆ ರಸ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಂಡೆಕಾಯಿಯಲ್ಲಿರುವ ಫೈಬರ್, ನಿಂಬೆ ರಸದಲ್ಲಿರುವ ವಿಟಮಿನ್ ಸಿ…

3 hours ago

ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ

ಈ ರಾಶಿಯ ಇಷ್ಟಪಟ್ಟವರ ಮನಸ್ಸು ಚಂಚಲ ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ , ಸೋಮವಾರದ ರಾಶಿ…

4 hours ago

ಸುಳ್ಳಾದ ಐಐಟಿ ಬಾಬಾ ಭವಿಷ್ಯವಾಣಿ : ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ

  ಸುದ್ದಿಒನ್ ಮಹಾ ಕುಂಭ ಮೇಳದಿಂದ ಪ್ರಸಿದ್ಧರಾದ ಐಐಟಿ ಬಾಬಾ ಈಗ ಇಂಟರ್ನೆಟ್ ಸೆನ್ಸೇಶನ್. ಅವರ ಸಂದರ್ಶನಗಳು ಮತ್ತು ಪಾಡ್‌ಕಾಸ್ಟ್‌ಗಳ…

11 hours ago

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

11 hours ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

12 hours ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

13 hours ago