Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, (ಅ‌.21) : ಹಿರಿಯೂರು ತಾಲ್ಲೂಕಿನ ವಿ.ವಿ.ಪುರ ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್ ಆರ್. ನರೇಂದ್ರಬಾಬು ಅವರು ಗುಲ್ಲಾ ಓಂಕಾರಪ್ಪ ಅವರಿಂದ ನರೇಗಾ  ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೂಲಿ ಕೆಲಸದ ಹಣ ಖಾತೆಗಳಿಗೆ ಜಮಾ ಮಾಡುವ ವಿಚಾರಕ್ಕೆ ಲಂಚ ಪಡೆದ ಆರೋಪಕ್ಕೆ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಓಂಕಾರಪ್ಪ ವಿ.ವಿ.ಪುರ ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್ ಆರ್. ನರೇಂದ್ರಬಾಬು ಅವರನ್ನು ಭೇಟಿ ಮಾಡಿ ಕೂಲಿ ಕೆಲಸದ ಹಣ ತಮ್ಮ ಖಾತೆಗಳಿಗೆ ಜಮಾ ಆಗಿರುವುದಿಲ್ಲ ಎಂದು ಕೇಳಿದ್ದು, ನಿಮ್ಮ ಖಾತೆಗೆ ಕೂಲಿ ಕೆಲಸ ಜಮಾ ಆಗಲು ಪಿ.ಡಿ.ಓ.ರವರು ಥಂಬ್‌ ನೀಡಬೇಕು. ನೀವು ಹಣವನ್ನು ಕೊಡದೆ ಅವರು ಥಂಬ್‌ ನೀಡುವುದಿಲ್ಲ.
ನೀವು ಪಿ.ಡಿ.ಓ.ರವರಿಗೆ ನೀಡಬೇಕಾದ ಹಣವನ್ನು ನನಗೆ ಕೊಡಿ, ಇಂಜಿನಿಯರ್‌ರವರಿಗೆ ನೀಡಬೇಕಾದ ಹಣವನ್ನು ಅವರಿಗೇ ಕೊಡಿ, ಬೇರೆಯವರೆಲ್ಲ ಒಂದು ಲಕ್ಷಕ್ಕೆ ಐದು ಸಾವಿರ ನೀಡಿದ್ದಾರೆ. ಸಾಹೇಬರಿಗೆ ಕೊಡಬೇಕಾದ ಆ ಹಣವನ್ನು ನನಗೆ ಕೊಡಿ ಎಂದು ರೂ.5000/- ಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಕಾರಪ್ಪ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿರುತ್ತಾರೆ. ಈ ದೂರಿನನ್ವಯ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

ಕಾರ್ಯಾಚರಣೆಯನ್ನು ಜಯಪ್ರಕಾಶ್‌, ಪೊಲೀಸ್ ಅಧೀಕ್ಷಕರು, ಭ್ರಷ್ಟಾಚಾರ ನಿಗ್ರಹದಳ, ಪೂರ್ವ ವಲಯ, ದಾವಣಗೆರೆ ಇವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುತ್ತದೆ.ಈ ಸಂದರ್ಭದಲ್ಲಿ ಚಿತ್ರದುರ್ಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಾದ ಡಿ.ವೈ.ಎಸ್.ಪಿ , ಬಸವರಾಜ ಆರ್. ಮಗದುಮ್, ಪೊಲೀಸ್ ನಿರೀಕ್ಷಕ ಹಸನ್‌ಸಾಬ್, ಪ್ರವೀಣ್ ಕುಮಾರ್, ಮತ್ತು ಸಿಬ್ಬಂದಿಗಳಾದ ಮಾರುತಿರಾಂ ಹೆಚ್‌.ಸಿ., ಓಬಣ್ಣ, ಹೆಚ್.ಸಿ.. ಹರೀಶ್ ಕುಮಾರ್, ಹೆಚ್.ಸಿ. ಹಾಗೂ ಫಕ್ರುದ್ದೀನ್, ಪಿ.ಸಿ. ಯತಿರಾಜ, ಪಿ.ಸಿ., ಫಯಾಜ್, ಪಿ.ಸಿ. ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!