Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ IPL 2023ಕ್ಕೆ ಅದ್ದೂರಿ ತೆರೆ : ಹೇಗಿದೆ ತಯಾರಿ..?

---Advertisement---

 

 

ಈ ಬಾರಿಯಾದರೂ ಕಪ್ ನಮ್ಮದೆ ಅಂತ ಆರ್ಸಿಬಿ ಅಭಿಮಾನಿಗಳು ಸಾಕಷ್ಟು ಕನಸು ಕಂಡಿದ್ದರು. ಆದರೆ ಅದು ನನಸಾಗಲಿಲ್ಲ. 16ನೇ ಆವೃತ್ತಿ ಮುಕ್ತಾಯವಾಗುತ್ತಿದೆ. ನಾಳೆ ಕಡೆಯ ಪಂದ್ಯದೊಂದಿಗೆ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮುನ್ನ ಸಮಾರೋಪ ಸಮಾರಂಭ ಅದ್ದೂರಿಯಾಗಿ ನೆರವೇರಲಿದೆ.

ಐಪಿಎಲ್ ಮುಕ್ತಾಯಕ್ಕೆ ಇನ್ನು ಉಳಿದಿರುವುದು ಒಂದೇ ಪಂದ್ಯ. ಮೇ 28 ಅಂದ್ರೆ ನಾಳೆ ಭಾನುವಾರ ಕೊನೆಯ ಮ್ಯಾಚ್ ನಡೆಯಲಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಹಾಗೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ. ಈ ರೋಚಕ ಪಂದ್ಯ ನೋಡಲು ಇಡೀ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ‌.

ಫೈನಲ್ ಪಂದ್ಯಕ್ಕೂ ಮುನ್ನ ಸಮಾರೋಪ ಸಮಾರಂಭ ನೆರವೇರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತೀರ್ಮಾನ ಮಾಡಿದೆ. ಅದ್ದೂರಿಯಾಗಿ ಸಮಾರೋಪ ಸಮಾರಂಭ ಮಾಡಲು ಯೋಜನೆ ರೂಪಿಸಲಾಗಿದೆ. ಇದರಲ್ಲಿ ಖ್ಯಾತ ರ್ಯಾಪರ್ ಗಳು ಪ್ರದರ್ಶನ ನೀಡಲಿದ್ದಾರೆ. ಕಿಂಗ್ ಮತ್ತು ಡಿಜೆ ನ್ಯೂಕ್ಲೀಯಾ ಶೋ ನೀಡಲಿದ್ದಾರೆ. ಜೊತೆಗೆ ಡಿವೈನ್ ಅಂಡ್ ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...