Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುದ್ದಿಒನ್ ಶತಮಾನದ ಸಂತ ವಿಶೇಷ ಸಂಚಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರ ಉತ್ತಮ ಪ್ರತಿಕ್ರಿಯೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.18): ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಶೂನ್ಯ ಪೀಠಾಧ್ಯಕ್ಷ ಹಾಗೂ ತ್ರಿವಿಧ ದಾಸೋಹಿಗಳಾದ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರ 30 ನೇ ವರ್ಷದ ಪೀಠಾರೋಹಣ ತೃತೀಯ ದಶಮಾನೋತ್ಸವದ ಪ್ರಯುಕ್ತ ಚಿತ್ರದುರ್ಗದ ಪಿ.ಎಲ್. ನಾಗೇಂದ್ರ ರೆಡ್ಡಿ ಸಾರಥ್ಯದ ನಂ. 1 ಆನ್ಲೈನ್ ನ್ಯೂಸ್ ಪೋರ್ಟಲ್ ಸುದ್ದಿಒನ್ ಹೊರ ತಂದಿರುವ ಶತಮಾನದ ಸಂತ ವಿಶೇಷ ಸಂಚಿಕೆಯನ್ನು ವೇದಿಕೆಯ ಮೇಲೆ ನೆರೆದಿದ್ದ ಬಹುತೇಕ ಗಣ್ಯರು ಓದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಶೂನ್ಯ ಪೀಠಾಧ್ಯಕ್ಷ ಹಾಗೂ ತ್ರಿವಿಧ ದಾಸೋಹಿಗಳಾದ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರ 30ನೇ ವರ್ಷದ ಪೀಠಾರೋಹಣ ತೃತೀಯ ದಶಮಾನೋತ್ಸವದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ವಿಶೇಷ ಸಂಚಿಕೆ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಕನ್ನಡಪ್ರಭ ಸಂಪಾದಕ ರವಿ ಹೆಗಡೆ ಮಾತನಾಡಿ, ಗಾಂಧೀಜಿ, ಅಂಬೇಡ್ಕರ್ ಬಸವಣ್ಣನವರ ಹೆಸರು ಹೇಳುತ್ತಾರೆ.  ಆದರೆ ಅವರ ತತ್ತ್ವಗಳನ್ನು ಅನುಸರಿಸುವುದಿಲ್ಲ. ಶ್ರೀಗಳು ಬಂಗಾರದ ಕಿರೀಟ, ಗದ್ದುಗೆ ಮತ್ತು ಸ್ವಾಮಿ ಎನ್ನುವ ಪದನಾಮವನ್ನು ತ್ಯಜಿಸಿ ಶರಣರು ಎಂಬ ಪದನಾಮವನ್ನು ಹೊಂದಿದರು ಎಂದು ತಿಳಿಸಿದರು.

ವಿಧವೆಯರಿಗೆ ಮರುವಿವಾಹ ಮಾಡಿಸಿದರು. ಕೆಟ್ಟ ಚಟಗಳನ್ನು ತನ್ನ ಜೋಳಿಗೆಗೆ ಹಾಕಿಸಿಕೊಂಡು ಅದರಿಂದ ಬಿಡುಗಡೆಗೊಳಿಸಿದರು.  ಅನೇಕ ಶೋಷಿತ ಸಮುದಾಯದವರಿಗೆ ಮಠಗಳನ್ನು ಸ್ಥಾಪಿಸಿದರು.  ಹಾಗೆಯೇ ಈ ಕಾರ್ಯಕ್ರಮದ ನಿರೂಪಣೆಯನ್ನು ಒಬ್ಬ ಮುಸ್ಲಿಂ ಮಹಿಳೆ ನಿರ್ವಹಿಸುತ್ತಿರುವುದು ಶ್ರೀಗಳ ಸಾಧನೆ ಎಂದು ಹೇಳಿದರು.

ಚಿತ್ರದುರ್ಗ ಶ್ರೀ ಮಾದಾರ ಚನ್ನಯ್ಯ ಗುರುಪೀಠದ  ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ,  ಎಲ್ಲ ಶೋಷಿತ ಸಮುದಾಯಗಳಿಗೆ ಶ್ರೀಗಳು ಸಮಾನತೆ ನೀಡಿದ್ದಾರೆ.   ದೀಕ್ಷೆ ಪಡೆದ ಪ್ರತಿಯೊಬ್ಬರಿಗೂ 5 ಎಕರೆ ಭೂಮಿಯನ್ನು ನೀಡಿ ಮಠಗಳನ್ನು ಸ್ಥಾಪಿಸಿಕೊಂಡು  ಅಭಿವೃದ್ಧಿಯತ್ತ ಸಾಗುವಂತೆ ಪ್ರೇರಣೆ ನೀಡಿದವರು ಮುರುಘಾ ಶರಣರು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಅವರ ಸಹಕಾರವು ಇಲ್ಲಿ ಪ್ರಮುಖ. ಬಸವರಾಜ ಬೊಮ್ಮಾಯಿ ಅವರು ಸಹ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.  ಬಸವಣ್ಣನವರ ಇಚ್ಛೆಯ ಸಮಸಮಾನತೆಯ ದಿನಾಚರಣೆಯನ್ನು ಜಾರಿಗೆ ತರಬೇಕೆಂಬ ಇಂಗಿತವನ್ನು ಮುಖ್ಯಮಂತ್ರಿ ಹೊಂದಿದ್ದಾರೆ ಎಂದು ತಿಳಿಸಿದರು.

ಇಂಡಿಯನ್ ಎಕ್ಸ್ ಪ್ರೆಸ್ ಎಡಿಟರ್ ಸಾಂತ್ವನಾ ಭಟ್ಟಾಚಾರ್ಯ ಮಾತನಾಡಿ, ಕ್ಯಾಪಿಟೇಬಲ್ ಇದು ಶರಣರ ತತ್ವಗಳು, ಧಾರ್ಮಿಕ , ಶೈಕ್ಷಣಿಕ, ಆಧ್ಯಾತ್ಮಿಕ, ಶ್ರೀಮಠದ ನೈಜ ಮಾಹಿತಿಯನ್ನು ಒಳಗೊಂಡಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಚಂದ್ರಪ್ಪ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಎಸ್ಪಿ ರಾಧಿಕಾ, ಸಿಇಒ ಡಾ. ನಂದಿನಿ, ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ಉತ್ಸವ ಸಮಿತಿ ಅಧ್ಯಕ್ಷ ಕೆ.ಎಸ್. ನವೀನ್ ಇತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!