Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಗೃಹ ಜ್ಯೋತಿ ಯೋಜನೆ : ನಾಲ್ಕು ದಿನಗಳಲ್ಲಿ 12.51 ಲಕ್ಷ ಗ್ರಾಹಕರ ನೋಂದಣಿ : ನಾಳೆಯಿಂದ ವಿದ್ಯುತ್ ಕಚೇರಿಗಳಲ್ಲಿ ನೋಂದಣಿಗೆ ಅವಕಾಶ

---Advertisement---

ಬೆಂಗಳೂರು: ʼಗೃಹ ಜ್ಯೋತಿʼ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸಂಜೆ ವೇಳೆಗೆ ಒಟ್ಟು 12.51 ಲಕ್ಷ  ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆಯು ಜೂನ್‌ 18 ರಂದು ಆರಂಭಗೊಂಡಿತ್ತು.

ಮೊದಲ  ದಿನ – 96,305,
ಎರಡನೆಯ ದಿನ- 3,34,845
ಮೂರನೇ ದಿನ ರಾತ್ರಿ ವೇಳೆಗೆ – 4,64,225 ಹಾಗೂ          ನಾಲ್ಕನೇ ದಿನ (ಬುಧವಾರ) 3.56 ಲಕ್ಷ  ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಮಧ್ಯ ರಾತ್ರಿ 12 ಗಂಟೆಗೆ ಈ ಸಂಖ್ಯೆ 4.5 ಲಕ್ಷ ದಾಟುವ ನೀರಿಕ್ಷೆ ಇದೆ.

ನಾಳೆಯಿಂದ (ಗುರುವಾರ) ರಾಜ್ಯದ ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಸಾರ್ವಜನಿಕರಿಗೆ ನೋಂದಣಿ ಮಾಡಲು ಪ್ರತ್ಯೇಕ ಲಾಗಿನ್ ಐಡಿ ಹಾಗೂ ಪ್ರತ್ಯೇಕ ಲಿಂಕ್ ಅನ್ನು ನೀಡಲಾಗಿದೆ. ಹಾಗಾಗಿ ನಾಳೆಯಿಂದ ರಾಜ್ಯದ 2000 ವಿದ್ಯುಚ್ಛಕ್ತಿ ಕಚೇರಿಗಳು, ಗ್ರಾಮ ಪಂಚಾಯತಿಗಳು ಹಾಗು ನಾಡ ಕಛೇರಿಗಳಲ್ಲಿ ಪ್ರತ್ಯೇಕ ಲಿಂಕ್‌ ಮೂಲಕ  ಗೃಹ ಜ್ಯೋತಿ ನೋಂದಣಿ ಪ್ರಕ್ರಿಯೆ ಸರಾಗವಾಗಿ ನಡೆಯಲಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು.

ಹೊಸ ಲಿಂಕ್‌ ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂಬುದನ್ನು ಪರಿಶೀಲಿಸಿ, ಅದನ್ನೇ ಸಾರ್ವಜನಿಕರಿಗೆ ನೀಡಲು ನಿರ್ಧರಿಸಲಾಗಿದೆ.
200 ಯೂನಿಟ್‌ ವರೆಗಿನ ಉಚಿತ ವಿದ್ಯುತ್‌ ಪಡೆಯುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ನೋಂದಣಿ ಪ್ರಕ್ರಿಯೆಯಲ್ಲಿ ದಿನೇ ದಿನೇ ಏರಿಕೆ ಕಂಡುಬರುತ್ತಿದ್ದು, ಸಾರ್ವಜನಿಕರು ಯೋಜನೆಯ ಪ್ರಯೋಜನ ಪಡೆಯಲು ಭಾರೀ ಉತ್ಸುಕತೆ ತೋರುತ್ತಿದ್ದಾರೆ. ಕರ್ನಾಟಕ ಒನ್‌, ಬೆಂಗಳೂರು ಒನ್‌ ಹಾಗು ಗ್ರಾಮ ಒನ್‌ ಜೊತೆಗೆ, ಸಾರ್ವಜನಿಕರು ತಮ್ಮ ಕಂಪ್ಯೂಟರ್‌, ಲ್ಯಾಪ್‌’ಟಾಪ್‌, ಮೊಬೈಲ್‌ ಫೋನ್‌ ಗಳಲ್ಲಿ ಹಾಗೂ ಕೆಲವು ವಿದ್ಯುತ್ ಕಚೇರಿಗಳಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.

ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವನ್ನು ನಿಗದಿಪಡಿಸದ ಕಾರಣ ಗ್ರಾಹಕರು ಗಡಿಬಿಡಿಯಾಗದೇ, ಆತಂಕ ಪಡದೇ ಸೇವಾ ಸಿಂಧು ಪೋರ್ಟಲ್‌

https://sevasindhugs.karnataka.gov.in

ಮೂಲಕ ನೋಂದಾಯಿಸಬಹುದು ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment