ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿಯಿಂದ ಚಾಲನೆ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಯಲ್ಲಿ ಗೃಹಲಕ್ಷ್ಮೀಯೂ ಒಂದು. ರಾಜ್ಯದ ಮಹಿಳೆಯರೆಲ್ಲ ಕಾಯುತ್ತಿದ್ದ ಯೋಜನೆಗಿಂದ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಯಿಂದ ಗೃಹಲಕ್ಷ್ಮೀಗೆ ಚಾಲನೆ ಸಿಕ್ಕಿದೆ. ಡಿಜಿಟಲ್ ಬಟನ್ ಒತ್ತುವ ಮೂಲಕ ಚಾಲನೆ ನೀಡಲಾಗಿದೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಚಾಲನೆ ಸಿಕ್ಕ ಬಳಿಕ 2 ಸಾವಿರ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ‌ಹಾಕಿದ್ದ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ.

ಕಾರ್ಯಕ್ರಮದ ವೇದಿಕೆ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *