ಬೆಂಗಳೂರು.ಸೆಪ್ಟೆಂಬರ್.12: ರಾಜ್ಯದ ಕೋಟ್ಯಂತರ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾಭಿಮಾನಿ ಬದುಕಿಗೆ ಆಸರೆಯಾಗಿರುವ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹೊಸ ಕಂತಿಗಾಗಿ ರಾಜ್ಯ ಸರ್ಕಾರ ಬರೋಬ್ಬರಿ ₹2,500 ಕೋಟಿ ಅನುದಾನ ಬಿಡುಗಡೆ ಮಾಡಿದೆ.
2026-27ನೇ ಸಾಲಿನ ಈ ಕಂತಿನ ಹಣವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಜಮೆ ಮಾಡಲು ಸರ್ಕಾರ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.
ನಾಡಿನ ಕೋಟ್ಯಂತರ ಮಹಿಳೆಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವುದೇ ಕರ್ನಾಟಕ ಸರ್ಕಾರದ ಬಹುದೊಡ್ಡ ಧ್ಯೇಯ. 'ಗೃಹಲಕ್ಷ್ಮಿ' ಯೋಜನೆಯಡಿ ಇದುವರೆಗೆ ಬರೋಬ್ಬರಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗಿದ್ದು, ಇದೀಗ 2026-27ನೇ ಸಾಲಿನ ಕಂತಿಗಾಗಿ ₹2,500 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅರ್ಹ… pic.twitter.com/TaoLMMKdVW
— CM of Karnataka (@CMofKarnataka) September 11, 2026
ನಾಡಿನ ಮಹಿಳೆಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಉದ್ದೇಶದಿಂದ ಜಾರಿಗೆ ತರಲಾದ ಈ ಯೋಜನೆಯಡಿ, ಇದುವರೆಗೆ ಒಟ್ಟು 1.24 ಕೋಟಿ ಅರ್ಹ ಮಹಿಳೆಯರಿಗೆ ಯಶಸ್ವಿಯಾಗಿ ಧನಸಹಾಯ ತಲುಪಿಸಲಾಗಿದೆ. ಮಹಿಳೆಯರ ಸ್ವಾವಲಂಬನೆಗೆ ನೀಡಿದ ಭರವಸೆಯನ್ನು ಸರ್ಕಾರ ಈಡೇರಿಸುತ್ತಿದ್ದು, ಜನಪರ ಗ್ಯಾರಂಟಿ ಯೋಜನೆಗಳು ಯಾವುದೇ ಅಡೆತಡೆಯಿಲ್ಲದೆ ನಿರಂತರವಾಗಿ ಮುಂದುವರಿಯಲಿವೆ ಎಂದು ತಿಳಿಸಲಾಗಿದೆ.











