Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮಿ ಯೋಜನೆ : ದಾವಣಗೆರೆ ಜಿಲ್ಲೆಯಲ್ಲಿ 1,10,000 ಫಲಾನುಭವಿಗಳ ನೊಂದಣಿ ಕಾರ್ಯ ಪೂರ್ಣ

---Advertisement---

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ದಾವಣಗೆರೆ; (ಜುಲೈ. 26) : 2023-24 ನೇ ಸಾಲಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯಡಿ ಜಿಲ್ಲೆಯ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ 2000 ಗಳನ್ನು ಡಿ.ಬಿ.ಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಜಿಲ್ಲೆಯಲ್ಲಿ ಅಂದಾಜು 4,50,000 ಫಲಾನುಭವಿಗಳಿದ್ದು, ಸುಮಾರು 1,10,000 ಫಲಾನುಭವಿಗಳ ನೊಂದಣಿ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಫಲಾನುಭವಿಗಳ ಅರ್ಜಿಗಳನ್ನು ಇನ್ನು ಒಂದು ವಾರದೊಳಗೆ ನೊಂದಣಿ ಮಾಡಲಾಗುತ್ತದೆ.

ಜಿಲ್ಲೆಯಾದ್ಯಂತ ಒಟ್ಟು 411 ನೊಂದಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅರ್ಜಿ ಸಲ್ಲಿಸಲು ಯಾವುದೇ ಕಾಲ ಮಿತಿಯಿರುವುದಿಲ್ಲ ಹಾಗೂ ನೊಂದಣಿಗೆ ಶುಲ್ಕ ಪಾವತಿಸುವಂತಿಲ್ಲ. ಯಾವುದೇ ಕೇಂದ್ರಗಳಲ್ಲಿ ನೋಂದಾಯಿಸಲು ಹಣ ಕೇಳಿದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಪೋಲೀಸ್ ಠಾಣೆ ಅಥವಾ ತಹಶೀಲ್ದಾರರ ಕಚೇರಿ ಸಂಪರ್ಕಿಸಿ ದೂರು ಸಲ್ಲಿಸಲು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...