ಬೆಂಗಳೂರು: ಇಷ್ಟು ದಿನಗಳ ಕಾಲ ಜಿಎಸ್ಟಿ ಕಟ್ಟಿ ಕಟ್ಟಿನೆ ಸಾಮನ್ಯ ಜನ ಸುಸ್ತಾಗಿ ಹೋಗಿದ್ದರು. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಜಿಎಸ್ಟಿ ದರ ಇಳಿಕೆ ಮಾಡಿದ ಮೇಲೆ ಸಾಮಾನ್ಯ ಜನ ಕೊಂಚ ರಿಲ್ಯಾಕ್ಸ್ ಆದ್ರು. ಆದರೆ ನೋಡ ನೋಡುತ್ತಲೇ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಲು ನಿರ್ಧಾರ ಮಾಡಿದೆ. ಈಗಾಗಲೇ ಈ ಸಂಬಂಧ ಪ್ರಕಟಣೆ ಕೂಡ ಹೊರಡಿಸಿದೆ. ಇದನ್ನ ನೋಡಿದ ಸಾಮಾನ್ಯ ಜನರಿಗೆ ಶಾಕ್ ಹೊಡೆದಂತೆ ಆಗಿದೆ.
ಈ ಸಂಬಂಧ ಸಾರ್ವಜನಿಕರ ಗಮನಕ್ಕೂ ಬಿಡಲಾಗಿದೆ. ಸಾರ್ವಜನಿಕರನ್ನು ಅಭಿಪ್ರಾಯ ಕೇಳಿದೆ. ಅದಕ್ಕಾಗಿ ಒಂದು ತಿಂಗಳ ಕಾಲವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ ಒಡೆತನದಲ್ಲಿರುವ ವಿದ್ಯುತ್ ವಿತರಣಾ ಕಂಪನಿಗಳು ಕೃಷಿ ಪಂಪ್ ಸೆಟ್ ಗೆ ವಿದ್ಯುತ್ ದರ ಕಡಿಮೆ ಮಾಡಿ, ಕೈಗಾರಿಕಾ ಮತ್ತು ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ ಗೆ 10 ಪೈಸೆಯಿಂದ 1ರೂಪಾಯಿ ಹೆಚ್ಚಿಸಿಕೊಡುವಂತೆ ಆಯೋಗಕ್ಕೆ ಸಲ್ಲಿಸುವ ಮೇಲ್ಮನವಿಗೆ ಈಗಾಗಲೇ ಎಫ್ ಕೆಸಿಸಿಐ ಮತ್ತು ಕಾಸಿಯಾ ಸೇರಿದಂತೆ ಹಲವು ವಾಣಿಜ್ಯ ಸಂಸ್ಥೆಗಳಿಂದ ತಕರಾರು ಅರ್ಜಿ ಸಲ್ಲಿಸಲಾಗಿದೆ. ಎರಡು ವರ್ಷಗಳ ಹಿಂದೆ ಕೆಇಆರ್ಸಿ ವಿದ್ಯುತ್ ದರ ಪರಿಷ್ಕರಣೆಗೆ ಮುನ್ನ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಕೈಗಾರಿಕಾ ಮತ್ತು ವಾಣಿಜ್ಯ ಬಳಕೆದಾರರ ಮೇಲಿರುವ ಕ್ರಾಸ್ ಸಬ್ಸಿಡಿ ಕಡಿಮೆ ಮಾಡುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿತ್ತು.
ಆದರೆ ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರಲಿಲ್ಲ. ವಿದೇಶಿ ಬಂಡವಾಳ ಹರಿದು ಬರುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನ ಗಳಿಸಿದೆ. ಒಂದು ವೇಳೆ ಕೆಇಆರ್ಸಿ ಕೈಗಾರಿಕಾ ಮತ್ತು ವಾಣಿಜ್ಯ ಬಳಕೆದಾರರಿಗೆ ವಿದ್ಯುತ್ ದರ ಹೆಚ್ಚಿಸಿದರೆ ಹೊರ ರಾಜ್ಯಗಳಿಂದ ಹೊರ ರಾಜ್ಯಗಳಿಂದ ಕೈಗಾರಿಕೆ ಬರುವುದು ನಿಲ್ಲುವುದಲ್ಲದೆ ಸ್ಥಳೀಯ ಕೈಗಾರಿಕೆಗಳು ಉತ್ಪಾದನೆ ಕಡಿಮೆ ಮಾಡಲಿವೆ.














