ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಜಿ.ಟಿ. ಸುರೇಶ್ ನೇಮಕ

1 Min Read

ಚಿತ್ರದುರ್ಗ, (ಫೆ.06) : ಜಿ.ಟಿ. ಸುರೇಶ್ ಅವರನ್ನು ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿ ನಗರಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಪ್ರಾಧಿಕಾರದ ಅಧೀನ ಕಾರ್ಯದರ್ಶಿ ಲತ ಕೆ. ಅವರು ಆದೇಶಿಸಿದ್ದಾರೆ.

ಪ್ರಾಧಿಕಾರದ ಸದಸ್ಯರಾಗಿ ರೇಖಾ.ಎ., ನಾಗರಾಜ್. ವಿ., ಉಷಾಬಾಯಿ.ಜಿ, ಮತ್ತು ಡಿ.ರಾಜು ಅವರನ್ನು ನೇಮಿಸ ಲಾಗಿದೆ. ನೂತನ ಅಧ್ಯಕ್ಷರಿಗೆ ಮತ್ತು ಸದಸ್ಯರಿಗೆ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಸೇರಿದಂತೆ ಪಕ್ಷದ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾನ್ಯ ಕಾರ್ಯಕರ್ತರಾಗಿ ಬೆಳೆದ ಜಿ.ಟಿ. ಸುರೇಶ್ ಅವರು ಚಿತ್ರದುರ್ಗ ಗ್ರಾಮಾಂತರ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ವೀರಶೈವ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿದ್ದಾರೆ.
ವೃತ್ತಿಯಲ್ಲಿ ಅಡಿಕೆ ವ್ಯಾಪಾರಿಯಾಗಿದ್ದು, ಬಿ ಎಸ್ ಸಿ  (ಅಗ್ರಿ) ಪದವೀಧರ ರಾಗಿದ್ದಾರೆ.

ಪಕ್ಷ ಜನ ಸೇವೆ ಮಾಡುವ ಅವಕಾಶ ನೀಡಿದೆ. ಇದನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಪ್ರಯತ್ನಿಸುತ್ತೇನೆ’ ಎಂದು ಜಿ.ಟಿ. ಸುರೇಶ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *