Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಬಂದ್ ಆಗಲ್ಲ, ಶೀಘ್ರದಲ್ಲೇ ಪರಿಷ್ಕರಣೆ: ಸಿಎಂ ಡಿ.ಕೆ. ಶಿವಕುಮಾರ್

---Advertisement---

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂಬ ಸಾರ್ವಜನಿಕ ವಲಯದ ವದಂತಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬ್ರೇಕ್ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಕೆಲವು ಅಗತ್ಯ ಪರಿಷ್ಕರಣೆಗಳನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಸರ್ಕಾರದ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಜಂಟಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಗ್ಯಾರಂಟಿ ಯೋಜನೆಗಳ ಮುಂದುವರಿಕೆಯ ಕುರಿತು ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.

ಯೋಜನೆಗಳು ಸಂಪೂರ್ಣವಾಗಿ ಯಶಸ್ವಿಯಾಗಬೇಕಾದರೆ ಲೋಪದೋಷಗಳನ್ನು ತಿದ್ದಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಂಟ್ರೋಲರ್ ಆಂಡ್ ಆಡಿಟರ್ ಜನರಲ್ (ಸಿಎಜಿ) ವರದಿ ಬಂದ ನಂತರ, ಯೋಜನೆಯಲ್ಲಿ ಎಲ್ಲೆಲ್ಲಿ ಲೋಪಗಳಾಗಿವೆ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು. ಅರ್ಹತೆ ಇಲ್ಲದವರ ಕೈಗೆ ಸೌಲಭ್ಯ ಸೇರುತ್ತಿದ್ದರೆ, ಅದನ್ನು ತಡೆದು ನಿಜವಾದ ಬಡವರಿಗೆ ಯೋಜನೆ ತಲುಪಿಸಲು ಈ ಪರಿಷ್ಕರಣೆ ಸಹಕಾರಿಯಾಗಲಿದೆ ಎಂದು ಸಿಎಂ ವಿವರಿಸಿದರು.

ಇದೇ ವೇಳೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಂದ ವಂಚಿತರಾದವರಿಗೆ ಮುಖ್ಯಮಂತ್ರಿಗಳು ಭರವಸೆಯೊಂದನ್ನು ನೀಡಿದ್ದಾರೆ. ತಾಂತ್ರಿಕ ಕಾರಣಗಳಿಂದ ಅಥವಾ ಇತರ ಸನ್ನಿವೇಶಗಳಿಂದಾಗಿ ಇದುವರೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದವರಿಗಾಗಿ, ಸದ್ಯದಲ್ಲೇ ಹೊಸದಾಗಿ ಅರ್ಜಿ ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.

Join WhatsApp

Join Now

Join Telegram

Join Now