Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಂತ್ರ ಕುತಂತ್ರದಿಂದ ಅತಿಥಿ ಉಪನ್ಯಾಸಕರ ಬದುಕನ್ನ ಇನ್ನಷ್ಟು ಅಭದ್ರಗೊಳಿಸಿದೆ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಟ್ವೀಟ್ ಮಾಡಿ ಬೇಸರ ಹೊರ ಹಾಕಿರುವ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಿರುವ @BJP4Karnataka ಸರ್ಕಾರ, ಅವರ ಕಾರ್ಯಭಾರದ ಎಂಟು ಗಂಟೆಯ ಅವಧಿಯನ್ನು ಹಿಂದಿನಂತೆಯೇ ಉಳಿಸಬೇಕು ಮತ್ತು ಈಗಾಗಲೇ ನಿವೃತ್ತಿಗೆ ಸಮೀಪ ಇರುವ ಅತಿಥಿ ಉಪನ್ಯಾಸಕರೂ ಸೇರಿದಂತೆ ಎಲ್ಲರಿಗೂ ಸೇವಾ ಭದ್ರತೆಯನ್ನು ಒದಗಿಸಬೇಕು.

ಕಾರ್ಯಭಾರವನ್ನು ದುಪ್ಪಟ್ಟು ಗೊಳಿಸುವ ನಿರ್ಧಾರದಿಂದಾಗಿ ಸುಮಾರು 14-15 ಸಾವಿರ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಹೊಸದಾಗಿ ಅತಿಥಿ ಉಪನ್ಯಾಸಕರ ನೇಮಕಾತಿಯ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿರುವುದು ಈ ಅನುಮಾನವನ್ನು ಬಲಪಡಿಸಿದೆ.

ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸುವ ಜೊತೆಯಲ್ಲಿ ಅವರ ತರಗತಿಗಳ ಅವಧಿಯನ್ನು ಹೆಚ್ಚಿಸಿರುವ @BJP4Karnataka ಸರ್ಕಾರ,
ಅರ್ಧದಷ್ಟು ಅತಿಥಿ ಉಪನ್ಯಾಸಕರನ್ನು ಮನೆಗೆ ಕಳಿಸಲು ಹೊರಟಿರುವುದು ಸ್ಪಷ್ಟವಾಗಿದೆ. ಇದು ನಿರಂತರ ಶೋಷಿತ ಅತಿಥಿ ಉಪನ್ಯಾಸಕರಿಗೆ ಬಗೆದಿರುವ ದ್ರೋಹವಾಗಿದೆ.

ಅತಿಥಿ ಉಪನ್ಯಾಸಕರ 8 ಗಂಟೆಯ ತರಗತಿಗಳಿಗೆ ನೀಡುತ್ತಿದ್ದ 11-12 ಸಾವಿರ ಗೌರವಧನವನ್ನ ರೂ.30-32 ಸಾವಿರಕ್ಕೆ ಹೆಚ್ಚಿಸಿರುವ @BJP4Karnataka ಸರ್ಕಾರ, ಅವರ ತರಗತಿಗಳ ಅವಧಿಯನ್ನು 8 ಗಂಟೆಯಿಂದ 16 ಗಂಟೆಗೆ ಹೆಚ್ಚಿಸಿ ಒಂದು ಕೈಯಲ್ಲಿ ಕೊಟ್ಟಿರುವುದನ್ನು ಇನ್ನೊಂದು ಕೈಯಿಂದ ಕಿತ್ತುಕೊಂಡಿದೆ.

ಗೌರವಧನ ಹೆಚ್ಚಿಸಿ, ಸೇವಾ ಸೌಲಭ್ಯ ಒದಗಿಸಿ ಅತಿಥಿ ಉಪನ್ಯಾಸಕರ ಬದುಕಿಗೆ ನೆರವಾಗಬೇಕಾಗಿದ್ದ @BJP4Karnataka ತನ್ನ ತಂತ್ರ-ಕುತಂತ್ರದ ಕ್ರಮಗಳ ಮೂಲಕ ಅವರ ಬದುಕನ್ನು ಇನ್ನಷ್ಟು ಅಭದ್ರಗೊಳಿಸಿ ವಿಶ್ವಾಸದ್ರೋಹ ಎಸಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!