Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವಸ್ಥಾನಕ್ಕೆ ಹೋಗಿದ್ದ ಬಿಜೆಪಿ ಕಾರ್ಯಕರ್ತನ ಕಗ್ಗೊಲೆ..!

---Advertisement---

ಬೆಳಗ್ಗೆ ಬೆಳಗ್ಗೆನೆ ಹೆಂಡತಿ ಜೊತೆಗೆ ದೇವಸ್ಥಾನಕ್ಕೆ ಹೋಗಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿರುವ ಘಟನೆ ಗುಜರಾತ್ ನ ವಲ್ಸಾದ್ ಜಿಲ್ಲೆಯಲ್ಲಿ ನಡೆದಿದೆ. ಶೈಲೇಶ್ ಪಟೇಲ್ ಮೃತ ಕಾರ್ಯಕರ್ತ.

ಶೈಲೇಶ್, ಬಿಜೆಪಿಯ ತಾಲೂಕು ಘಟಕದ ಅಧ್ಯಕ್ಷರಾಗಿದ್ದರು. ಇಂದು ಬೆಳಗ್ಗೆ 7.30ರ ಸುಮಾರಿಗೆ ತನ್ನ ಪತ್ನಿ ಜೊತೆಗೆ ವಾಪಿ ನಗರದ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆ ಮುಗಿದ ಬಳಿಕ ಹೊರಗಡೆ SUV ಕಾರಿನಲ್ಲಿ ಹೆಂಡತಿಗಾಗಿ ಕಾದು ಕುಳಿತಿದ್ದರು. ಅಲ್ಲಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ.

ಶೈಲೇಶ್ ಪಾಟೀಲ್ ಮೇಲೆ ಎರಡು ಸುತ್ತು ಗುಂಡಿನ ಸುರಿಮಳೆ ನಡೆಸಿದ್ದಾರೆ. ಇದರಿಂದಾಗಿ ಶೈಲೇಶ್ ಪಾಟೀಲ್ ಕಾರಿನಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅವರ ಪತ್ನಿ ಕಾರಿನ ಬಳಿ ಬರುವಷ್ಟರಲ್ಲಿಯೇ ಆಗಂತುಕರು ಎಸ್ಕೇಪ್ ಆಗಿದ್ದರು. ಶೈಲೇಶ್ ಪಾಟೀಲ್ ಅವರನ್ನಿ ತಕ್ಷಣ ಆಸ್ಪತ್ರೆಗೆ ದಾಖಲಿಸಿತ್ತಾದರೂ ಬದುಕುಳಿದಿಲ್ಲ. ಈ ಸಂಬಂಧ ವಲ್ಸಾದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಕಾ ಬಂಧಿ ಹಾಕಿ, ಹಲ್ಲೆ ಮಾಡಿದವರ ಹುಡುಕಾಟದಲ್ಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...