ಗುಜರಾತ್ ಮೊದಲ ಹಂತದ ಚುನಾವಣೆಯಲ್ಲಿ ಗಲಭೆ : ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ

 

ಗಾಂಧಿನಗರ: ಇಂದಿನಿಂದ ಗುಜರಾತ್ ನಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಡಿಸೆಂಬರ್ ಕ್ಕೆ ಎರಡನೇ ಹಂತದ ಚುನಾವಣೆ ನಡೆಯಲಿದೆ. ಆದ್ರೆ ಇಂದು ಪೊಲೀಸ್ ಬಿಗಿ ಭದ್ರತೆಯಲ್ಲಿಯೇ ಚುನಾವಣೆ ನಡೆಯುತ್ತಿದ್ದರು, ಬಿಜೆಪಿಯ ಅಭ್ಯರ್ಥಿಯ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ.

ಇಂದು 89 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನವ್ಸಾರಿ ವಿಧಾನಸಭಾ ಕ್ಷೇತ್ರದಲ್ಲಿ ಗಲಾಟೆ ನಡೆದಿದೆ. ಇಲ್ಲಿನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಿಯೂಷ್ ಬಾಯ್ ಪಟೇಲ್ ಅಭಯ್ರ್ಥಿಯಾಗಿ ಕಣಕ್ಕಿಳಿದಿದ್ದರು. ಝಾರಿ ಎಂಬ ಕ್ಷೇತ್ರಕ್ಕೆ ಪಿಯೂಷ್ ಭೇಟಿ ನೀಡಿದ್ದು, ಈ ವೇಳೆ ಕಿಡಿಗೇಡಿಗಳ ಗುಂಪೊಂದು ಹಲ್ಲೆ ಮಾಡಿದೆ. ಪಿಯೂಷ್ ಅವರ ತಲೆಯಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ.

ಅವರಿದ್ದ ಕಾರಿನ ಮೇಲೆಯೂ ದಾಳಿ ಮಾಡಿದ್ದಾರೆ. ಇದರಿಂದ ಕಾರಿನ ಗಾಜು ಪುಡಿ ಪುಡಿಯಾಗಿದೆ. ಪಿಯೂಷ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಗುಜರಾತ್ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಇನ್ನು ಗುಜರಾತ್ ಸಿಎಂ ಕೂಡ ಈ ಕೇಸ್ ಸಂಬಂಧ ಕಿಡಿಗೇಡಿಗಳನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *