ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ಚಳ್ಳಕೆರೆ ಟೋಲ್ಗೇಟ್ 32 ನೇ ವಾರ್ಡ್ನಲ್ಲಿ ನಗರಸಭೆಗೆ ಸೇರಿದ ಜಾಗದಲ್ಲಿ ಗುಜರಿ ಅಂಗಡಿಯಿಟ್ಟುಕೊಂಡಿರುವುದನ್ನು ತೆರವುಗೊಳಿಸುವಂತೆ ನಗರಸಭೆ ಜಾಗವೆಂದು ನಾಮಫಲಕ ಅಳವಡಿಸಿದಾಗ ನಗರಸಭೆ ಸದಸ್ಯ ದೀಪು ನಾಮಫಲಕದ ಬಳಿ ಕುಳಿತು ಗುಜರಿ ಅಂಗಡಿಯನ್ನು ತೆರವುಗೊಳಿಸದಂತೆ ವಿರೋಧ ವ್ಯಕ್ತಪಡಿಸಿದರು.
ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್ ಹಾಗೂ ಭಾಸ್ಕರ್ ಇವರುಗಳು ಗುಜರಿ ಅಂಗಡಿ ಮುಂದೆ ನಗರಸಭೆ ಸ್ವತ್ತು ಎನ್ನುವ ನಾಮಫಲಕ ಅಳವಡಿಸಿದಾಗ ನಗರದ ಬೇರೆ ಬೇರೆ ಕಡೆಯಿರುವ ನಗರಸಭೆ ಜಾಗಗಳಿಗೆ ಮೊದಲು ನಗರಸಭೆ ಸ್ವತ್ತು ಎಂದು ನಾಮಫಲಕ ಅಳವಡಿಸುವಂತೆ ಸದಸ್ಯ ದೀಪು ಪಟ್ಟುಹಿಡಿದು ಮಾತಿನ ಜಟಾಪಟಿಯಲ್ಲಿ ತೊಡಗಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









