Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗುಂಡಮ್ಮನ ‘ರವಿಕೆ ಪ್ರಸಂಗ’ ಬಲು ಜೋರು

---Advertisement---

‘ಬ್ರಹ್ಮಗಂಟು’ ಧಾರಾವಾಹಿಯ ಗುಂಡಮ್ಮ ಅಂದ್ರೆ ಎಲ್ಲರಿಗೂ ಇಷ್ಟ. ಆ ಧಾರಾವಾಹಿ ಮುಗಿದ ಮೇಲೆ ಗುಂಡಮ್ಮನನ್ನು ಮಿಸ್ ಮಾಡಿಕೊಂಡವರೆ ಹೆಚ್ಚು. ಬಳಿಕ ಗೀತಾ ಭಾರತೀ ಭಟ್ ಅಭಿಮಾನಿಗಳಿಗಾಗಿ ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಸಂಪರ್ಕಕ್ಕೆ ಸಿಗುತ್ತಿದ್ದರು. ಫಿಟ್ನೆಸ್ ಕಡೆಗೆ ಹೆಚ್ಚು ಗಮನ ಕೊಟ್ಟಿದ್ದರು. ಇದೀಗ ಅವರದ್ದೇ ‘ರವಿಕೆ ಪ್ರಸಂಗ’ ರಿಲೀಸ್ ಗೆ ರೆಡಿಯಾಗಿದ್ದು, ಪ್ರಮೋಷನ್ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಅಷ್ಟೇ ಅಲ್ಲ ರವಿಕೆಯ ಪ್ರಸಂಗವೂ ಅತ್ಯಂತ ಕುತೂಹಲಕಾರಿಯಾಗಿದೆ. `ರವಿಕೆ ಪ್ರಸಂಗ’ ಇದೇ ಫೆಬ್ರವರಿ 16ರಂದು ರಾಜ್ಯಾದ್ಯಂತ ತೆರೆಗಾಣಲಿದೆ.


ಸಂತೋಷ್ ಕೊಡಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ರಾಜ್ಯಾದ್ಯಂತ ಸುತ್ತಾಡಿ, ಪ್ರಚಾರ ನಡೆಸುತ್ತಿದ್ದಾರೆ. ವಿಶೇಷವೆಂದರೆ, ಚಿತ್ರತಂಡ ಕ್ರಿಯಾಶೀಲ ಹಾದಿಯಲ್ಲಿ, ಹಲವಾರು ಹೊಸತನಗಳೊಂದಿಗೆ ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಜನರ ನಡುವೆ ಸಿನಿಮಾ ಪ್ರಚಾರ ಮಾಡುತ್ತಿದ್ದಾರೆ. ಇದೀಗ ಉಡುಪಿಯ ಪ್ರಸಿದ್ಧ ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ಮೀಟ್ ಆಂಡ್ ಗ್ರೀಟ್ ಕಾನ್ಸೆಪ್ಟಿನಲ್ಲೊಂದು ಚೆಂದದ ಪ್ರಚಾರ ಕಾರ್ಯ ನೆರವೇರಿದೆ.

ಉಡುಪಿಯ ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ರವಿಕೆ ಪ್ರಸಂಗದ ಪ್ರಚಾರದ ನೆಪದಲ್ಲೊಂದು ಹಬ್ಬವೇ ನಡೆದು ಹೋಗಿದೆ. ಈ ಮಳಿಗೆಯ ಸರಿಸುಮಾರು ಒಂಬೈನೂರಕ್ಕೂ ಹೆಚ್ಚು ಸಿಬ್ಬಂದಿಗಳ ಸಮ್ಮುಖದಲ್ಲಿ ಈ ಪ್ರಚಾರ ಕಾರ್ಯ ಯಶಸ್ವಿಯಾಗಿ ನಡೆದಿದೆ. ನಾಯಕಿ ಗೀತಾ ಭಾರತೀ ಭಟ್ ಅವರೆಲ್ಲರೊಂದಿಗೆ ಉತ್ಸಾಹದಿಂದ ಬೆರೆತು, ರವಿಕೆ ಪ್ರಸಂಗದ ಬಗ್ಗೆ ಮನಮುಟ್ಟುವಂತೆ ವಿವರಿಸಿದರು. ಸಿಬ್ಬಂದಿ ಕೂಡಾ ಖುಷಿಯಿಂದಲೇ ಗೀತಾ ಮತ್ತು ಚಿತ್ರತಂಡದ ಜೊತೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ಇದೆಲ್ಲವೂ ಸಾಧ್ಯವಾದದ್ದು ಈ ಮಳಿಗೆಯ ಮಾಲೀಕರಾದ ವೀರೇಂದ್ರ ಹೆಗ್ಡೆ ಅವರ ಸಿನಿಮಾ ಪ್ರೀತಿಯಿಂದಾಗಿ. ಅವರು ಅತ್ಯಂತ ಆಪ್ತವಾಗಿ ಸಿನಿಮಾ ತಂಡದ ಜೊತೆ ತಮ್ಮ ಸಿಬ್ಬಂದಿಗಳ ಬೆರೆತು ಖುಷಿಪಡಲು ಅನುವು ಮಾಡಿ ಕೊಟ್ಟಿದ್ದರು. ನಂತರ ರಘು ಪಾಂಡೇಶ್ವರ ಕೂಡಾ ನೆರೆದಿದ್ದವರನ್ನೆಲ್ಲ ನಕ್ಕುನಲಿಸಿ ಭರ್ಜರಿ ಮನೋರಂಜೆ ನೀಡಿದರು. ಇದೇ ಸಂಭ್ರಮದ ನಡುವೆ ಜಯಲಕ್ಷ್ಮಿ ಸಿಲ್ಕ್ಸ್ ಮಾಲೀಕರಾದ ವೀರೇಂದ್ರ ಹೆಗ್ಡೆ ರವಿಕೆ ಪ್ರಸಂಗಕ್ಕೆ ಬೆಂಬಲ ಘೋಶಿಸಿದರು. ತಮ್ಮ ಸಿಬ್ಬಂದಿಯ ಸಮೇತ ಚಿತ್ರವನ್ನು ವೀಕ್ಷಿಸುವುದಾಗಿ ಭರವಸೆ ನೀಡಿದರು.

ಈ ಮೀಟ್ & ಗ್ರೀಟ್ ಪರಿಕಲ್ಪನೆಯ ಪ್ರಚಾರ ಕಾರ್ಯದಲ್ಲಿ ಗೀತಾ ಭಾರತಿ ಭಟ್, ನಿರ್ದೇಶಕ ಸಂತೋಷ್ ಕೊಡಂಕೇರಿ, ಕಥೆಗಾರ್ತಿ, ಸಂಭಾಷಣಾಗಾರ್ತಿ ಪಾವನಾ ಸಂತೋಷ್, ರಕ್ಷಕ್, ಕಲ್ಯಾಣ್ ಸೇರಿದಂತೆ ಚಿತ್ರತಂಡ ಹಾಜರಿತ್ತು. ಈಗಾಗಲೇ ಕನರ್ಬಾಟಕದ ನಾನಾ ಭಾಗಗಳಲ್ಲಿ ವಿಭಿನ್ನ ಪರಿಕಲ್ಪನೆಯ ಮೂಲಕ ಚಿತ್ರತಂಡ ರವಿಕೆ ಪ್ರಸಂಗದ ಪ್ರಚಾರ ನಡೆಸಿದೆ. ಮೈಸೂರು, ಕೊಡಗು, ದಕ್ಷಿಣಕನ್ನಡವೂ ಸೇರಿದಂತೆ ನಾನಾ ಭಾಗಗಳಲ್ಲಿ ಈಗಾಗಲೇ ರವಿಕೆ ಪ್ರಸಂಗದ ಪ್ರಭೆ ಪಸರಿಸಿಕೊಂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment