Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

Facebook
Twitter
Telegram
WhatsApp

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಎಸ್‌ಐಟಿ ತನಿಖೆ ನಡೆಸುವ ಭರವಸೆ ನೀಡಿದ್ದ ಬೆನ್ನಲ್ಲೇ, ಧನ್ಯವಾದ ತಿಳಿಸಲು ಠೇವಣಿದಾರರು ಆಗಮಿಸಿದ್ದಾರೆ.

ನಿನ್ನೆ ಕೂಡ ಪ್ರಿಯಾಂಕ ಗಾಂಧಿ ಅವರನ್ನ ಭೇಟಿಯಾಗಿದ್ದ ಠೇವಣಿದಾರರು, ಈ ವೇಳೆ ರಾಜ್ಯ ಸರ್ಕಾರ ನಿರ್ದೇಶನ ನೀಡುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದರು. ಹೀಗಾಗಿ ಇಂದು ಡಿಸಿಎಂ ಡಿಕೆಶಿ ಭೇಟಿಯಾಗಿದ್ದಾರೆ. ಸಾಕಷ್ಟು ಅನ್ಯಾಯ ಆಗಿದೆ ಎಂದು ಡಿಕೆಶಿ ‌ಮುಂದೆ ನೋವು ತೋಡಿಕೊಂಡಿದ್ದಾರೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದ್ರೆ ಯಾವುದೇ ಪರಿಹಾರ ಇಲ್ಲ. ಇದರಲ್ಲಿ ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ ಇದಾರೆ ಸರ್.

ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ ಸರ್. ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಸರ್ ಎಂದು ಗೋಳಾಡಿದಾಗ, ನಾನು ಮುಖ್ಯಮಂತ್ರಿಗಳಿಗೆ ಹೇಳುತ್ತೇನೆ ಎಂದು ಡಿಕೆಶಿ ಸಮಾಧಾನ ಮಾಡಿದ್ದಾರೆ. ಮನವಿ ಪತ್ರವನ್ನ ಸಿಬ್ಬಂದಿಗೆ ನೀಡಿ ಮುಖ್ಯಮಂತ್ರಿಗಳಿಗೆ ಲೆಟರ್ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!