ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 01 : ಗುರು-ಶಿಷ್ಯರ ನಡುವಿನ ಅವಿನಾಭಾವ ಸಂಬಂಧ ನಿತ್ಯ ನಿರಂತರವಾಗಿರಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ಕರೆ ನೀಡಿದರು.
ಜೋಗಿಮಟ್ಟಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1980-81 ನೇ ಸಾಲಿನ ಹಿರಿ, ಕಿರಿಯ ವಿದ್ಯಾರ್ಥಿಗಳಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ
ಗುರುವಂದನಾ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.
ಬಾಲ್ಯದಲ್ಲಿ ಈ ಶಾಲೆಯಲ್ಲಿ ಓದಿದ ಗೆಳೆಯರ ನಡುವಿನ ಅನುಭವ ಜೀವನದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಸುಮಾರು ನಲವತ್ತೈದು ವರ್ಷಗಳ ಹಿಂದೆ ಈ ಭಾಗದಲ್ಲಿ ಶಾಲೆಯೇ ಇಲ್ಲದಂತ ಸಮಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನೇಕ ಮಕ್ಕಳಿಗೆ ಶಿಕ್ಷಣ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ನೆರವಾಗಿದೆ. ಮಕ್ಕಳನ್ನು ತಿದ್ದಿ ತೀಡಿ ಸಂಸ್ಕಾರ ಕಲಿಸುವ ಗುರುವನ್ನು ಜೀವನದಲ್ಲಿ ಮರೆಯಬಾರದೆಂದು ಹಳೆಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮನೆಯೆ ಮೊದಲ ಪಾಠಶಾಲೆ. ತಾಯಿಯೆ ಮೊದಲು ಗುರು ಎನ್ನುವ ನಾಣ್ಣುಡಿ ಪ್ರಸಿದ್ದಿಯಲ್ಲಿದೆ. ಶಾಲೆಯಲ್ಲಿ ಗುರುವಿನ ಪಾತ್ರ ಅಮೂಲ್ಯವಾದುದು. ಶಿಕ್ಷಣದ ಜೊತೆ ಸಂಸ್ಕಾರ ಕಲಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ. ಹಾಗಾಗಿ ಗುರುವಿನ ಋಣ ತೀರಿಸುವುದು ಸುಲಭವಲ್ಲ ಎಂದರು.
ಜ್ಞಾನಾರ್ಜನೆ ಅಷ್ಟು ಸುಲಭವಲ್ಲ. ಶಾಲೆಯಲ್ಲಿ ಮಕ್ಕಳಿಗೆ ಜ್ಞಾನ ಸಂಪತ್ತು ಕೊಡುವ ಗುರುವಿನ ಮಹತ್ವ ಅತ್ಯಂತ ಶ್ರೇಷ್ಟವಾದುದು. ಶಾಲೆಯೆಂದರೆ ದೇವಾಲಯವಿದ್ದಂತೆ. ಪಾಠ ಕಲಿತ ಹಳೆಯ ಶಾಲೆಯ ಬಗ್ಗೆ ವಿದ್ಯಾರ್ಥಿಗಳು ಅಭಿಮಾನವಿಟ್ಟುಕೊಂಡು ಗುರುಗಳನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು. ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಗುರುಗಳನ್ನು ಅಭಿನಂದಿಸುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ ಎಂದು ಗುಣಗಾನ ಮಾಡಿದರು.
ನಗರಸಭೆ ಮಾಜಿ ಸದಸ್ಯ ಗರಡಿ ಪ್ರಕಾಶ್, ನಾಮನಿರ್ದೇಶಿತ ಸದಸ್ಯ ಓಂಕಾರ್, ಶ್ರೀಧರ್, ಶ್ರೀನಿವಾಸ್, ಮಂಜುನಾಥ್, ಮಧುಸೂದನ್, ನಾಗರಾಜ್, ನಾಗೇಶ್, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್ಕುಮಾರ್ ಇವರುಗಳು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…
ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…
ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…
ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…
ಚೆನ್ನೈ; ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಕೊಟ್ಟ ಬಳಿಕ ಇದೀಗ ಅವಿರೋಧ ಆಯ್ಕೆ ಮಾಡಲಾಗಿದೆ.…
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ದಾಸ್ ಅವರ…