Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಠ ಖ್ಯಾತಿಯ ಗುರುಪ್ರಸಾದ್ ಆತ್ಮಹತ್ಯೆ : ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..!

---Advertisement---

ಬೆಂಗಳೂರು: ಮಠ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯಿಂದ ಇಡೀ ಚಿತ್ರರಂಗ ಶಾಕ್ ಆಗಿದೆ. ಇದ್ದಕ್ಕಿದ್ದ ಹಾಗೇ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಕನ್ನಡದ ಚಿತ್ರರಂಗದ ಅತ್ಯಂತ ಸೃಜನಶೀಲ ನಿರ್ದೇಶಕರ ಸಾಲಿನಲ್ಲಿ ಗುರುಪ್ರಸಾದ್ ನಿಲ್ಲುತ್ತಾರೆ. ಇದೀಗ ಏಕಾಏಕಿ ತಮ್ಮ ಜೀವನವನ್ನೇ ಅಂತ್ಯ ಮಾಡಿಕೊಂಡಿದ್ದಾರೆ.

2006ರಲ್ಲಿ ಮಠ ಸಿನಿಮಾವನ್ನು ನಿರ್ದೇಶನ ಮಾಡುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಯಾಗಿದ್ದರು. ಇಲ್ಲಿಯವರೆಗೂ ಐದು ಕನ್ನಡ ಸಿನಿಮಾಗಳನ್ನು ಮಾಡಿದ್ದಾರೆ. ಒಂದು ಸಿನಿಮಾದ ಶೂಟಿಂಗ್ ಕೂಡ ನಡೆಯುತ್ತಿತ್ತು. ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡು ದಿಗ್ಬ್ರಮೆಗೊಳಿಸಿದ್ದಾರೆ.

ಮತ್ತೊಂದು ಶಾಕಿಂಗ್ ವಿಚಾರ ಅಂದ್ರೆ ಗುರುಪ್ರಸಾದ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 10 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಾದನಾಯಕನಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಮೃತದೇಹ ಪತ್ತೆಯಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ಅವರ ಹುಟ್ಟುಹಬ್ಬವಿತ್ತು. ಆದೃ ಹುಟ್ಟುಹಬ್ಬಕ್ಕೂ ಮುನ್ನವೇ ಜೀವ ಕಳೆದುಕೊಂಡಿದ್ದಾರೆ. ಸತ್ತು ಹತ್ತು ದಿನಗಳಾಗಿವೆ ಎನ್ನಲಾಗಿದೆ. ಬಿಗ್ ಬಾಸ್ ನಲ್ಲೂ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಕನ್ನಡ ಇಂಡಸ್ಟ್ರಿಯಲ್ಲಿ ನಿರ್ದೇಶನ ಮಾತ್ರವಲ್ಲ ಒಳ್ಳೆ ಬರಹಗಾರರಾಗಿದ್ದರು. ಮಾಡಿದ್ದು ಐದೇ ಸಿನಿನಾವಾದರೂ ಒಳ್ಳೊಳ್ಳೆ ಸಿನಿಮಾಗಳನ್ನು ನೀಡಿ, ಖ್ಯಾತಿ ಪಡೆದಿದ್ದರು. ಇತ್ತಿಚೆಗೆ ಸುಮಾರು ಜನ ನಿಮ್ಮ ಸಿನಿಮಾ ಯಾವಾಗ ಬರುತ್ತೆ ಅಂತೆಲ್ಲಾ ಕೇಳುತ್ತಿದ್ದರು. ಆದರೆ ಇದೀಗ ಎಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಹತ್ತು ದಿನವಾದರು ಅವರ ಸಾವಿನ ಸುಳಿವು ಯಾರಿಗೂ ಸಿಗದೆ ಇರುವುದೆ ವಿಪರ್ಯಾಸ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...