Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಕೆ.ಕೃಷ್ಣ ನಿಧನಕ್ಕೆ ಎಚ್.ಆಂಜನೇಯ ಸಂತಾಪ

---Advertisement---

ಚಿತ್ರದುರ್ಗ: ಡಿ.10 : ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಎಲ್ಲ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿ, ಸಮರ್ಥವಾಗಿ ನಿಭಾಯಿಸಿದ ಬೆರಳೆಣಿಕೆ ರಾಜಕಾರಣಿಗಳಲ್ಲಿ ಎಸ್.ಕೆ.ಕೃಷ್ಣ ಪ್ರಮುಖರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಡೀ ಜಗತ್ತು ಕರ್ನಾಟಕದ ಕಡೆ ತಿರುಗಿ ನೋಡುವ ರೀತಿ ಐಟಿ-ಬಿಟಿ ಮೂಲಕ ಬೆಂಗಳೂರನ್ನು ಕಟ್ಟಿದ ರೀತಿ, ಜೊತೆಗೆ ಉದ್ಯೋಗ ಸೃಷ್ಠಿಗೆ ಅಗತ್ಯ ಯೋಜನೆ ರೂಪಿಸಿದ ದೂರದೃಷ್ಟಿ ರಾಜಕಾರಣಿ. ಅವರು ಬೆಂಗಳೂರನ್ನು ಐಟಿ-ಬಿಟಿ ಹೆಬ್ಬಾಗಿಲು ಆಗಿಸುವಲ್ಲಿ ಶ್ರಮಿಸಿದ್ದು ವಿಶೇಷ.
ಸೌಮ್ಯ ರಾಜಕಾರಣಿ ಎಸ್.ಎಂ.ಕೃಷ್ಣ ಅಗಲಿಕೆ ತೀವ್ರ ನೋವುಂಟು ಮಾಡಿದ್ದು, ಅತ್ಯುತ್ತಮ ಸಂಸದೀಯ ಹಿರಿಯ ಪಟು ಆಗಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದ ಎಸ್.ಎಂ.ಕೃಷ್ಣ, ಇಂದಿರಾಗಾಂಧಿ ಅವರ ಜನಪರ ಆಡಳಿತಕ್ಕೆ ಆಕರ್ಷಿತರಾಗಿ ಕಾಂಗ್ರೆಸ್ ಸೇರಿ ಲೋಕಸಭೆ, ವಿಧಾನಸಭೆ ಸದಸ್ಯರು, ಸ್ಪೀಕರ್, ಮಂತ್ರಿ, ಮುಖ್ಯಮಂತ್ರಿ, ರಾಜ್ಯಪಾಲ, ಕೇಂದ್ರ ಸಚಿವ ಸೇರಿ ರಾಷ್ಟ್ರದ ಬಹುತೇಕ ಎಲ್ಲ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮರ್ಥವಾಗಿ ನಿಭಾಯಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

ಬೆಂಗಳೂರನ್ನು ಐಟಿ-ಬಿಟಿಯ ಹೆಬ್ಬಾಗಿಲು ಮಾಡಿದ ಕೀರ್ತಿ ಜತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹೀಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಕೊಟ್ಟ ಮಹಾನ್ ನಾಯಕ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ.

ಕೆಂಗಲ್ ಹನುಮಂತಯ್ಯ ವಿಧಾನಸಭೆ ಕಟ್ಟಿದರೆ, ಎಸ್.ಎಂ.ಕೃಷ್ಣ ವಿಕಾಸಸೌಧ ನಿರ್ಮಾಣ ಮಾಡುವ ಮೂಲಕ ದೂರದೃಷ್ಟಿಯ ರಾಜಕಾರಣಿ ಎಂಬುದನ್ನು ತಮ್ಮ ಆಡಳಿತದ ಮೂಲಕ ದೃಢಪಡಿಸಿದ ರಾಜಕಾರಣಿ.
ಕಾಡುಗಳ್ಳ ವೀರಪ್ಪನ್ ನಾಡಿನ ವರನಟ ಡಾ.ರಾಜಕುಮಾರ್ ಅವರನ್ನು ಅಪಹರಣ ಮಾಡಿದ ಸಂದರ್ಭ ಆ ಸವಾಲನ್ನು ಮೆಟ್ಟಿನಿಂತು ಕನ್ನಡದ ಕಣ್ಮಣಿಯನ್ನು ನಾಡಿಗೆ ಕರೆತಂದಿದ್ದು ಇತಿಹಾಸದ ಪುಟಗಳಲ್ಲಿ ದಾಖಲಾಗುವಂತ ಘಟನೆ. ಇಂತಹ ಅಪರೂಪದ ರಾಜಕಾರಣಿಯ ಮಾಗದರ್ಶನ ನಾಡಿಗೆ ಇನ್ನಷ್ಟು ಕಾಲ ಬೇಕಿತ್ತು ಎಂದು ಎಚ್.ಆಂಜನೇಯ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...