ರಾಜ್ಯ ಮಟ್ಟದ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಚಿತ್ರದುರ್ಗದ ಹೆಚ್.ಪ್ಯಾರೇಜಾನ್ ಆಯ್ಕೆ

0 Min Read

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 28 : ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ನೀಡಲಾಗುವ ರಾಜ್ಯ ಮಟ್ಟದ ಪ್ರತಿಷ್ಠಿತ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಚಿತ್ರದುರ್ಗದ ಹೆಚ್.ಪ್ಯಾರೇಜಾನ್ ಆಯ್ಕೆಯಾಗಿದ್ದಾರೆ.

ಕೊಳಗೇರಿ ನಿವಾಸಿಗಳ ಹಕ್ಕಿಗಾಗಿ ಸಾಕಷ್ಟು ಹೋರಾಟ ಸೇರಿದಂತೆ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೆಚ್.ಪ್ಯಾರೇಜಾನ್‍ರವರ ಸಾಮಾಜಿಕ ಕಳಕಳಿಯನ್ನು ಗುರುತಿಸಿ ನ.30 ರಂದು ಮೈಸೂರಿನಲ್ಲಿ ನಡೆಯುವ ಕನ್ನಡ ಹಬ್ಬದಲ್ಲಿ ಕನ್ನಡ ವಿಕಾಸ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ
ಯಮುನಾ ಹೆಚ್.ಎಲ್.ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *