Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಹಾಲಶ್ರೀ ಸ್ವಾಮೀಜಿ ಕೈವಾಡ : ಸಚಿವ ಪರಮೇಶ್ವರ್ ಹೇಳಿದ್ದೇನು..?

ಸಚಿವ ಪರಮೇಶ್ವರ್
---Advertisement---

 

ಉದ್ಯಮಿಯೊಬ್ಬರಿಗೆ 7 ಕೋಟಿ ಮೋಸ ಮಾಡಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪರಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ ಈ ಮಧ್ಯೆ ಒಂದೊಂದೆ ಹೊಸ ವಿಚಾರಗಳು ತೆರೆದುಕೊಳ್ಳುತ್ತಿವೆ. ಅದರಲ್ಲಿ ಈಗ ಹಾಲಶ್ರೀ ಸ್ವಾಮೀಜಿಯ ವಿಚಾರವೂ ಒಂದು. ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಹಾಲಶ್ರೀ ಸ್ವಾಮೀಜಿಯ ಕೈವಾಡವಿದೆ ಎನ್ನಲಾಗಿದೆ.

ಈ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ಉದ್ಯಮಿ ಗೋವಿಂದ ಬಾಬು ಪೂಜಾರಿ ಹೇಳಿಕೆ ಆಧಾರದ ಮೇಲೆ ಚೈತ್ರಾ ಕುಂದಾಪುರ ಅಂಡ್ ಟೀಂ ಅನ್ನು ಬಂಧಿಸಲಾಗಿದೆ. ತನಿಖೆ ನಡೆದ ಮೇಲೆ ಎಲ್ಲಾ ಸತ್ಯ ಗೊತ್ತಾಗಲಿದೆ. ಇನ್ನು ಪ್ರಕರಣದಲ್ಲಿ ಹಾಲಶ್ರೀ ಸ್ವಾಮೀಜಿಯ ಕೈವಾಡವಿದೆ ಎಂದಾದರೆ ಅದರ ಬಗ್ಗೆಯೂ ತನಿಖೆಯಾಗುತ್ತೆ. ಸ್ವಾಮೀಜಿಯದ್ದು ತಪ್ಪು ಇದ್ದರೆ, ಸಾಬೀತಾದರೆ ಅವರ ಬಂಧನವೂ ಆಗುತ್ತೆ. ಪೊಲೀಸರು ಸುಮೋಟೋ ಹಾಕಿಕೊಂಡಿಲ್ಲ, ದೂರು ಬಂದಿದೆ. ಅದರ ಆಧಾರದ ಮೇಲೆ ಬಂಧನವಾಗಿದೆ.

ಹಿಂದೂ ಪರವಾದ ಭಾಷಣ ಮಾಡಿದ್ದಾರೆ. ಅದನ್ನ ಇದಕ್ಕೆ ಮಿಕ್ಸ್ ಮಾಡುವುದು ಬೇಡ. ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿಯಲ್ಲಿಯೇ ಟಿಕೆಟ್ ಕೊಡಿಸುವುದಾಗಿ ಹೇಳಿದ್ದಾರೆ. 3.5 ಕೋಟಿ ಹಣ ಪಡೆದ ದೂರು ನೀಡಿದ್ದಾರೆ. ಈಗ ದೂರು ಆಧರಿಸಿ ತನಿಖೆ ನಡೆಯುತ್ತಿದೆ. ಉಳಿದ ವಿಚಾರ ತನಿಖೆಯ ನಂತರ ತಿಳಿಯಲಿದೆ. ತಪ್ಪು ಯಾರದ್ದೇ ಆಗಿರಲಿ, ಕಾನೂನು ಪ್ರಕಾರ ಕ್ರಮ ಜರುಗಲಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...