ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್ : ಇಸ್ರೇಲ್ ಗೆ ನುಸುಳಿ ವಿಧ್ವಂಸಕ ಕೃತ್ಯ ಎಸಗುತ್ತಿರುವ ಹಮಾಸ್ ಭಯೋತ್ಪಾದಕರು ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಕ್ರೌರ್ಯವನ್ನು ಮೆರೆಯುತ್ತಿದ್ದಾರೆ. ಇವುಗಳಿಗೆ ಸಂಬಂಧಿಸಿದ ಒಂದೊಂದೇ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಬೆಳಕಿಗೆ ಬರುತ್ತಿವೆ. ಇತ್ತೀಚಿಗೆ ನಡೆದ ಹೃದಯ ವಿದ್ರಾವಕ ಘಟನೆ ಎಲ್ಲರ ಹೃದಯವನ್ನು ಹಿಂಡುವಂತಿದೆ.
ಗರ್ಭಿಣಿಯ ಹೊಟ್ಟೆಯನ್ನು ಸೀಳಿ ಮಗುವನ್ನು ಹೊರತೆಗೆದ ಹಮಾಸ್ ಉಗ್ರರು ಮಗುವನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಇರಿದು ಕೊಂದಿದ್ದಾರೆ. ಈ ವಿಷಯ ಹೊರಬೀಳುತ್ತಿದ್ದಂತೆ ಹಮಾಸ್ ಭಯೋತ್ಪಾದಕರ ಕೃತ್ಯಗಳು ಹೊರಜಗತ್ತಿಗೆ ತಿಳಿಯುತ್ತಿವೆ. ಇಸ್ರೇಲ್ಗೆ ಅಕ್ರಮವಾಗಿ ನುಸುಳಿರುವ ಹಮಾಸ್ ಉಗ್ರರು ರಾಕ್ಷಸರಂತೆ ವರ್ತಿಸಿದ ರೀತಿ ವಿಶ್ವದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಚಿಕ್ಕವರು, ದೊಡ್ಡವರು ಎಂಬ ಭೇದವಿಲ್ಲದೆ ಮಹಿಳೆಯರು, ಚಿಕ್ಕ ಮಕ್ಕಳು, ಸಾಕು ಪ್ರಾಣಿಗಳನ್ನು ಮೆಷಿನ್ ಗನ್ ನಿಂದ ಗುಂಡಿಟ್ಟು ಕೊಲ್ಲುತ್ತಿದ್ದಾರೆ. ಪುಟ್ಟ ಮಕ್ಕಳ ತಲೆ ಕಡಿಯುವ ಮೂಲಕ ಅತ್ಯಂತ ಕ್ರೂರ ದಾಳಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಮತ್ತೊಂದು ವಿಕೃತ ಕೃತ್ಯ ಬೆಳಕಿಗೆ ಬಂದಿದೆ.
ತಾಯಿಯ ಹೊಟ್ಟೆಯಲ್ಲಿದ್ದ ಮಗುವನ್ನು ಸಹ ಬಿಡದ ಹಮಾಸ್ ಭಯೋತ್ಪಾದಕರು ಮಹಿಳೆಯ ಗರ್ಭವನ್ನು ಸೀಳಿ ಬರ್ಬರವಾಗಿ ಮಗುವನ್ನು ಇರಿದು ಕೊಂದಿದ್ದಾರೆ. ಮತ್ತು ಗಾಜಾ ಪಟ್ಟಿಯ ಗಡಿಯಲ್ಲಿನ ಕಿಬ್ಬುಟ್ಜ್ನಲ್ಲಿ 40 ಮಕ್ಕಳನ್ನು ಅತ್ಯಂತ ಕೆಟ್ಟದಾಗಿ ಕೊಂದಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್