ಅಭಿಮಾನ ಆವೇಶವಾಗಬಾರದು : ಹಂಸಲೇಖ ಪತ್ರ ಮನವಿ

1 Min Read

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಅವರು ನೀಡಿದ ಹೇಳಿಕೆಯ ಪರ ವಿರೋಧ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿಯೇ ಎದ್ದಿತ್ತು. ಹಂಸಲೇಖ ಪರವಾಗಿಯೂ ಸಾಕಷ್ಟು ಜನ ಮಾತನಾಡಿದ್ರು. ಆ ವಿಚಾರವಾಗಿ ಕ್ಷಮೆಯನ್ನು ಕೇಳಿದ್ದರು. ಇದೀಗ ಅಭಿಮಾನಿಗಳಲ್ಲಿ ಪತ್ರದ ಮೂಲಕ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.

ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೇ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ.. ಸಹಿಸಿದ್ದೀನಿ , ಅದರ ಸುಖ ಇವತ್ತು ಅನಿಭವಿಸುತ್ತಿದ್ದೀನಿ. ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ.

ನಾನು ಕೇಳದೆ ಇಡೀ ಕರ್ನಾಟದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ, ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ. ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿದೆ. ಅಭಿಮಾನ ಆವೇಶವಾಗಬಾರದು: ಆವೇಶ ಅವಘಢಗಳಿಗೆ ಕಾರಣವಾಗಬಾರದು ! ಅಭಿಮಾನ ಹಾಡಿನಂತೆ ಇರಬೇಕು , ಹಾಡು ಕೇಳಿಸುತ್ತದೆ .. ಮುಟ್ಟಿಸುತ್ತದೆ .. ನಿಮ್ಮ ಪ್ರೀತಿ ನನಗೆ ತಲುಪಿದೆ . ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು ಎಂದು ಪತ್ರ ಬರೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *