Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ – ಚಿತ್ರದುರ್ಗ ರೈತರಲ್ಲಿ ಸಂತಸ : ಏನದು ಗೊತ್ತಾ..?

---Advertisement---

ಚಿತ್ರದುರ್ಗ; ಕೃಷಿಯನ್ನೇ ನಂಬಿ ಬದುಕುವ ರೈತರಿಗೆ ಮಳೆ ಚೆನ್ನಾಗಿ ಬಂದರೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ. ಕಳೆದ ಬಾರಿ ಉತ್ತಮ ಮಳೆಯಾಗಿದೆ. ಈ ಬಾರಿಯೂ ಉತ್ತಮ ಮಳೆಯಾಗುವ ಲಕ್ಷಣಗಳು ಕಾಣಿಸಿಕೊಂಡಿವೆ. ಯಾಕಂದ್ರೆ ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಶುರುವಾಗಿದೆ. ಹೀಗಾಗಿ ಈ ಬಾರಿ ಉತ್ತಮ ಮಳೆಯಾಗಲಿದೆ, ಬೆಳೆಯೂ ಆಗಲಿದೆ ಎನ್ನಲಾಗಿದೆ. ಇದರ ನಡುವೆಯೇ ದಾವಣಗೆರೆ ಹಾಗೂ ಚಿತ್ತದುರ್ಗ ರೈತರಿಗೆ ಸಂತಸದ ಸುದ್ದಿಯೊಂದು ಸಿಕ್ಕಿದೆ. ಅದುವೇ ಭದ್ರಾ ಜಲಾಶಯದಿಂದ.

ಹೌದು, ಭದ್ರ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗಿದ್ದು, ಗುರುವಾರ ಮುಂಜಾನೆಗೆ ಅಂದ್ರೆ ಶುಕ್ರವಾರಕ್ಕೆ 19,270 ಕ್ಯೂಸೆಕ್ ನೀರಿನ ಮಟ್ಟ ಮುಟ್ಟಿದೆ. ಇದು ದಾವಣಗೆರೆ- ಚಿತ್ರದುರ್ಗ ಅವಳಿ ನಗರ್ ರೈತರ ಸಂತಸಕ್ಕೆ‌ಕಾರಣವಾಗಿದೆ. ಕಳೆದ 20 ದಿನಗಳಿಂದ ಸುರಿದ ಮಳೆಗೆ 10 ಅಡಿ ನೀರು ಶೇಖರಣೆಯಾಗಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ತೋಟಗಾರಿಕೆ ಕೃಷಿ ಹೆಚ್ಚು. ಅಡಿಕೆ ಬೆಳೆಗಾರರು ಹೆಚ್ಚಾಗಿದ್ದಾರೆ. ಅದರಲ್ಲೂ ಭದ್ರಾ ಡ್ಯಾಂ ನೀರನ್ನೇ ನಂಬಿ ಕೃಷಿ ಮಾಡುವವರ ಸಂಖ್ಯೆ ಜಾಸ್ತಿ ಇದೆ. ಅಡಿಕೆ ಬೆಳೆಗೆ ನೀರು ಕೂಡ ಹೆಚ್ಚಾಗಿ ಬೇಕಾಗುತ್ತದೆ. ಹೀಗಾಗಿ ಭದ್ರಾ ಡ್ಯಾಂ ನಲ್ಲಿ ನೀರು ಎಷ್ಟೇ ಸಂಗ್ರಹವಾದರೂ ಕೂಡ ರೈತರಿಗೆ ಸಂತಸ ಹೆಚ್ಚಾಗಿರುತ್ತದೆ. ಅಡಿಕೆ ಫಸಲು ಉತ್ತಮವಾಗಿ ಬಂದರೆ, ಬೆಲೆಯೂ ಹೆಚ್ಚಾಗುವ ನಿರೀಕ್ಷೆ ರೈತರದ್ದು. ಭದ್ರಾ ಜಲಾಶಯ ಕೇವಲ ಕೃಷಿಗಾಗಿ ಮಾತ್ರವಲ್ಲ ಸುತ್ತ ಮುತ್ತ ಹಲವು ಪ್ರದೇಶಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment