Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಾರವಾಡದ ಮಕ್ಕಳಿಗೆ ಖುಷಿ ಸುದ್ದಿ : ಸಚಿವ ಜೋಶಿಯವರಿಂದ ಹೈಟೆಕ್ ಕ್ಲಾಸ್ ರೂಮ್, ಡೆಸ್ಕ್, ಅಂಗನವಾಡಿ ಉಚಿತ..!

Facebook
Twitter
Telegram
WhatsApp

ಧಾರವಾಡ: ಶಾಲಾ-ಕಾಲೇಜಿನಲ್ಲಿ ಮಕ್ಕಳು ಏನು ಕಲಿಯುತ್ತಾರೋ ಅದು ಅವರ ಮುಂದಿನ ಭವಿಷ್ಯಕ್ಕೆ ನಾಂದಿ ಆಗುತ್ತದೆ. ಅಲ್ಲಿನ ಸೌಲಭ್ಯ, ಶಿಕ್ಷಣ ಚೆನ್ನಾಗಿದ್ದರೆ ಆ ಭವಿಷ್ಯ ಉಜ್ವಲವಾಗುತ್ತದೆ. ಆದರೆ ಸರ್ಕಾರಿ ಶಾಲೆಗಳು ಈಗ ಯಾವ ಸ್ಥಿತಿಯಲ್ಲಿದ್ದಾವೆ ಎಂಬುದನ್ನು ಬಿಡಿಸಿ ಹೇಳುವ ಹಾಗಿಲ್ಲ. ಆದರೆ ಧಾರವಾಡ ಜಿಲ್ಲೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸ್ಪೆಷಲ್ ಗಿಫ್ಟ್ ನೀಡುತ್ತಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಜೋಶಿ ಅವರು, ಶಾಲೆಗೊಂದು ಸ್ಮಾರ್ಟ್ ಕ್ಲಾಸ್ ರೂಮ್, 50 ಸಾವಿರ ಹೊಸ ಡೆಸ್ಕ್, 100 ಹೈಟೆಕ್ ಅಂಗನವಾಡಿಗಳನ್ನು ಕಟ್ಟಿಸಿಕೊಡುವ ಭರವಸೆ ನೀಡಿದ್ದಾರೆ. ಸಿ ಎಸ್ ಆರ್ ಫಂಡ್ ಮುಖೇನ ತಮ್ಮ ಕ್ಷಮತಾ ಸೇವಾ ಸಂಸ್ಥೆ ಜೊತೆಗೂಡಿ ಈ ಕಾರ್ಯವನ್ನು ಮುಂದಿನ ಎರಡು ವರ್ಷಗಳಲ್ಲಿ ಜಾರಿ ಪೂರ್ಣಗೊಳಿಸುವಂತೆ ಭರವಸೆ ನೀಡಿದ್ದಾರೆ.

ಇನ್ನು ಬಣ್ಣ ದರ್ಪಣ ಕಾರ್ಯಕ್ರಮದಡಿ, ಪ್ರತಿ ತಿಂಗಳು 100 ಶಾಲೆಗಳಿಗೆ ನಾಳೆಯಿಂದ ಬಣ್ಣ ಬಳಿಯುವ ಕಾರ್ಯ ಆರಂಭವಾಗಲಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1177 ಶಾಲೆಗಳಿಗೆ ಹೊಸ ಬಣ್ಣ ಬಳಿಯುವ ಗುರಿಯನ್ನು ಹೊಂದಿದ್ದು, ಈ ಕಾರ್ಯ ನಾಳೆಯಿಂದ ಆರಂಭವಾಗಲಿದ್ದು, ಮುಂದಿನ ವರ್ಷ ದೀಪಾವಳಿಗೆ ಮುಕ್ತಾಯವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!