ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಆ. 13 : ಭಾರತೀಯ ಜನತಾ ಪಾರ್ಟಿಯವತಿಯಿಂದ ಹಮ್ಮಿಕೊಂಡಿರುವ ಹರ್-ಘರ್ ತಿರಂಗಾ ಅಭಿಯಾನದಲ್ಲಿ ಮಾಧ್ಯಮ ವಿಭಾಗದಿಂದ ಗುರುವಾರ ಚಿತ್ರದುರ್ಗ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಪದಾಧಿಕಾರಿ ಗಳಿಗೆ ರಾಷ್ಟ್ರ ಧ್ವಜವನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿನಯಕುಮಾರ್ ತೊಡರನಾಳ್, ಪತ್ರಕರ್ತರಾದ ಕುಮಾರ್, ಕೃಷ್ಣಮೂರ್ತಿ, ಹನುಮಂತ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಸಹ ವಕ್ತಾರ ನವೀನ್ ಚಾಲುಕ್ಯ, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ರೇಖಾ, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ನಗರ ಕಾರ್ಯದರ್ಶಿ ಬಸವೇಶ್, ಮುರಳಿ ಸಮಾ, ವೀಣಾ ಕಾಂಚನ ಕಿರಣ್, ಶಿವಕುಮಾರ್, ರೈತರಾದ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಹಾಜರಿದ್ದರು.









