Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆ ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆಯಲು ವಿದ್ಯಾರ್ಥಿಗಳ ಶ್ರಮ ಮುಖ್ಯ : ಕ್ಷೇತ್ರ ಶಿಕ್ಷಣಾಧಿಕಾರಿಗಳದ ತಿಪ್ಪೇಸ್ವಾಮಿ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.01) : ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ ಹತ್ತನೇ ತರಗತಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಮೊದಲ ಸ್ಥಾನ ಪಡೆಯಬೇಕೆಂದರೆ ನಿಮ್ಮ ಪರಿಶ್ರಮ ತುಂಬಾ ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳದ ತಿಪ್ಪೇಸ್ವಾಮಿ ಹೇಳಿದರು.

ನಗರದ ಹೊರವಲಯದಲ್ಲಿರುವ ಬಾಪೂಜಿ ಸಮನ್ವಯ ಪ್ರೌಢಶಾಲೆ ಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಂವಾದ  ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳದ ಕೆ. ಎಂ. ವೀರೇಶ್ ಅವರು ಮಾತನಾಡುತ್ತ ವಿದ್ಯಾರ್ಥಿಗಳಿಗೆ ಏಕಾಗ್ರತೆ ಮುಖ್ಯ ಏಕಾಗ್ರತೆಯಿಂದ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾದ ಆಂಗ್ಲ ಭಾಷಾ ವಿಷಯ ಪರಿವೀಕ್ಷಕರಾದ ಚಂದ್ರಣ್ಣ ಅವರು ಆಂಗ್ಲ ಭಾಷೆ ತುಂಬಾ ಸುಲಭವಾದ ಭಾಷೆ ಯಾವುದೇ ಭಯ ಇಲ್ಲದೆ ಪರೀಕ್ಷೆಯನ್ನು ಎದುರಿಸಿ ಎನ್ನುವ ಆತ್ಮವಿಶ್ವಾಸವನ್ನು ತುಂಬಿದರು.

ಕಾರ್ಯಕ್ರಮದಲ್ಲಿ ಇನಾಯತ್, ಶಿಕ್ಷಣ ಸಂಯೋಜಕರು, ಬಾಪೂಜಿ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಎಂಟು ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಗಳಾಗಿ ರುಖಿಯ ಖಾನಮ್ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಧುಮೇಹ ಇರುವವರು ತುಪ್ಪವನ್ನು ತಿನ್ನಬಹುದಾ ? ತಿಂದರೆ ಏನಾಗುತ್ತದೆ ?

ಸುದ್ದಿಒನ್ : ತುಪ್ಪದಲ್ಲಿ ಕೊಬ್ಬು ಹೆಚ್ಚಾಗಿ ಇರುತ್ತದೆ. ಆದರೆ, ಮಧುಮೇಹ ಇರುವವರು ಇದನ್ನು ತಿನ್ನಬಹುದೇ ಅಥವಾ ಇಲ್ಲವೇ ಎಂಬ ಅನುಮಾನವಿದೆ. ಆದರೆ, ತುಪ್ಪವನ್ನು ಔಷಧಿ ಎಂದು ಹೇಳಬಹುದು.  ಮಧುಮೇಹಿಗಳು ಇದನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.  ತುಪ್ಪವನ್ನು

EXAM Motivation : ಪರೀಕ್ಷೆಯಲ್ಲಿ ಫೇಲ್ ಆದರೆ ಆತ್ಮಹತ್ಯೆ ಪರಿಹಾರವಲ್ಲ : ಬದುಕನ್ನು ನಿರ್ಧರಿಸುವುದು ಪರೀಕ್ಷೆಗಳಲ್ಲ…!

ಸುದ್ದಿಒನ್ : ಇದು ಪರೀಕ್ಷೆಯ ಕಾಲ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡದಲ್ಲಿರುತ್ತಾರೆ. ಆದರೆ ಪರೀಕ್ಷೆಗಳು ಮಾತ್ರ ನಿಮ್ಮ ಜೀವನವನ್ನು ನಿರ್ಧರಿಸುವುದಿಲ್ಲ. ಪರೀಕ್ಷೆಗಳ ನಂತರ ಬಹಳಷ್ಟು ಜೀವನವು ನಮ್ಮ ಮುಂದಿದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ

ಈ ರಾಶಿಯವರ ದಾಂಪತ್ಯದಲ್ಲಿ ವೈಮನಸ್ಸು

ಈ ರಾಶಿಯವರ ದಾಂಪತ್ಯದಲ್ಲಿ ವೈಮನಸ್ಸು ಮಂಗಳವಾರ ರಾಶಿ ಭವಿಷ್ಯ -ಮಾರ್ಚ್-19,2024 ಸೂರ್ಯೋದಯ: 06:24, ಸೂರ್ಯಾಸ್ತ : 06:23 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ,

error: Content is protected !!