Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾರ್ದಿಕ್ ಪಾಂಡ್ಯಾ & ನತಾಶ ಡಿವೋರ್ಸ್ ಆಗ್ತಿಲ್ಲ : ಇಷ್ಟು ದಿನ ಗಾಸಿಪ್ ಆಗೋದಕ್ಕೆ ಬಿಟ್ಟಿದ್ದೇಕೆ ಈ ಜೋಡಿ..?

Facebook
Twitter
Telegram
WhatsApp

ಕಳೆದ ಕೆಲವು ದಿನಗಳಿಂದ ಹಾರ್ದಿಕ್ ಪಾಂಡ್ಯಾ ಹಾಗೂ ನತಾಶದೆ ಸುದ್ದಿ. ಇಬ್ಬರು ಬೇರೆ ಬೇರೆ ಆಗ್ತಾರಂತೆ, ಡಿವೋರ್ಸ್ ಗ್ಯಾರಂಟಿ ಅಂತೆ ಅಂತ. ಅದಕ್ಕೆ ತಕ್ಕ ಹಾಗೆ ನತಾಶ ಹಾಗೂ ಹಾರ್ದಿಕ್ ಪಾಂಡ್ಯಾ ಸೋಷಿಯಲ್ ಮೀಡಿಯಾದ ಬೆಳವಣಿಗೆ ಸಹ ಇತ್ತು. ಹೆಸರು ತೆಗೆದು ಹಾಕಿದ್ದಲ್ಲದೆ ಅದಕ್ಕೆ ತದ್ವಿರುದ್ಧವಾದ ಫೋಟೋಗಳನ್ನೇ ಹಾಕುತ್ತಿದ್ದರು. ಪಾಪರಾಜಿಗಳು ಸಿಕ್ಕಾಗ, ಪ್ರಶ್ನೆ ಮಾಡಿದಾಗ ಮೌನವಾಗಿ ಹೋಗುತ್ತಿದ್ದರು. ಈ ಎಲ್ಲಾ ವಿದ್ಯಾಮಾನಗಳು ದಾಂಪತ್ಯ ಜೀವನದ ಅಂತ್ಯವನ್ನೇ ಸೂಚಿಸುತ್ತಿದ್ದವು. ಇದರ ನಡುವೆ ಹಾರ್ದಿಕ್ ಪಾಂಡ್ಯ ಜೀವನಾಂಶದ ತನಕವೂ ಸುದ್ದಿಯಾಗಿತ್ತು. ಇದೀಗ ಅದಕ್ಕೆಲ್ಲ ತದ್ವಿರುದ್ಧವಾಗಿದೆ. ಇಬ್ಬರು ದೂರವಾಗುತ್ತಿಲ್ಲ ಎಂಬುದನ್ನು ಖಚಿತ ಪಡಿಸಿದ್ದಾರೆ.

ಇದೀಗ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮದುವೆಯ ಬ್ಯೂಟಿಫುಲ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯಾ ಜೊತೆಗೆ ಕ್ಲೋಸ್ ಆಗಿ ಇರುವ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಇಬ್ಬರು ಡಿವೋರ್ಸ್ ತೆಗೆದುಕೊಳ್ಳುತ್ತಿಲ್ಲ ಎಂಬುದನ್ನು ಖಚಿತ ಪಡಿಸಿದ್ದಾರೆ.

ಹಾರ್ದಿಕ್ ಪಾಂಡ್ಯಾ ಹಾಗೂ ನತಾಶ 2020ರಲ್ಲಿ ರಿಜಿಸ್ಟರ್ ರೀತಿಯಲ್ಲಿ ಮದುವೆಯಾಗಿದ್ದರು. ಮದುವೆಗೂ ಮುನ್ನವೇ ನತಾಶ ಗರ್ಭಿಣಿಯಾಗಿದ್ದರು. ದಂಪತಿಗೆ ಒಬ್ಬ ಗಂಡು ಮಗನಿದ್ದಾನೆ. ಡಿವೋರ್ಸ್ ಸುದ್ದಿ ಹಬ್ಬುವುದಕ್ಕೆ ಪಿಆರ್ ಕಾರಣ ಎನ್ನಲಾಗಿದೆ. ಇದೊಂದು ಪಬ್ಲಿಕ್ ಸ್ಟಂಟ್ ಎಂದು ಹೇಳಲಾಗುತ್ತಿದ್ದು, ನತಾಶ ಕೂಡ ಅದೇ ಕಾರಣಕ್ಕಾಗಿ ಮದುವೆಯ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದರಂತೆ. ಈಗ ಎಲ್ಲಾ ಹಳೆಯ ಫೋಟೋಗಳನ್ನು ಮತ್ತೆ ಅಪ್ಲೋಡ್ ಕೊಟ್ಟಿದ್ದಾರೆ. ಈ ಮೂಲಕ ಇಬ್ಬರು ದೂರವಾಗ್ತಿಲ್ಲ ಎಂಬುದಂತು ಖಚಿತವಾಗಿದೆ. ಫ್ಯಾನ್ಸ್ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಚಿವ ಡಿ.ಸುಧಾಕರ್ ಸೂಚನೆ

  ಚಿತ್ರದುರ್ಗ. ಜುಲೈ.01:   ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ

ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು. ನಗರದ ಬಸವೇಶ್ವರ

ಪರಿಸರ ನಾಶವಾದರೆ ಮನುಕುಲಕ್ಕೆ ಆಪತ್ತು : ಮಂಜುನಾಥ್ ಭಾಗವತ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 01 : ಪರಿಸರದ ಬಗ್ಗೆ ಎಲ್ಲರೂ ಕಾಳಜಿಯನ್ನು ವಹಿಸಬೇಕಿದೆ. ಪರಿಸರ ನಾಶವಾದರೆ ಮನುಕುಲಕ್ಕೆ ಆಪತ್ತು

error: Content is protected !!