Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಗನ ಜೊತೆ ಕಪ್ ಗೆದ್ದ ಖುಷಿ ಹಂಚಿಕೊಂಡ ಹಾರ್ದಿಕ್ ಪಾಂಡ್ಯ : ಪತ್ನಿಯ ಸುಳಿವಿಲ್ಲ.. ಡಿವೋರ್ಸ್ ಕನ್ಫರ್ಮ್..?

Facebook
Twitter
Telegram
WhatsApp

ನಮ್ಮ ಟೀಂ ಇಂಡಿಯಾ ವಿಶ್ವಕಪ್ ತಮ್ಮದಾಗಿಸಿಕೊಂಡು ಬಹಳ ಸಂಭ್ರಮದಲ್ಲಿದೆ. ಗೆದ್ದ ಮರುದಿನವೇ ತವರಿಗೆ ಬರಲು ಆಗದೆ ಹೋದರು, ಈಗ ಬಂದಿರುವ ಟೀಂ ಇಂಡಿಯಾ ಸದಸ್ಯರನ್ನು ಎಲ್ಲರೂ ಕೊಂಡಾಡಿದ್ದಾರೆ. ಈಗಾಗಲೇ ಆಟಗಾರರ ಜೊತೆಗೆ ವಿಶ್ವಕಪ್ ಮೆರವಣಿಗೆಯೂ ನಡೆದಿದೆ. ಆಟಗಾರರಿಗೆ ಅವರವರ ಮನೆಯಲ್ಲಿ ಅದ್ದೂರಿ ಸ್ವಾಗತವೂ ಸಿಕ್ಕಿದೆ. ಮನೆಯವರ ಜೊತೆಗೆ ಸೆಲೆಬ್ರೇಷನ್ ಕೂಡ ಜೋರಾಗಿದೆ.

ಹಾರ್ದಿಕ್ ಪಾಂಡ್ಯ ಕೂಡ ವಿಶ್ವಕಪ್ ಗೆದ್ದ ಬಳಿಕ ಮನೆಗೆ ಬಂದಿದ್ದಾರೆ. ಮನೆಯಲ್ಲಿ ಬಲೂನ್ ಗಳಿಂದ ಅಲಂಕಾರ ಮಾಡಿದ್ದು, ಹಾರ್ದಿಕ್ ಪಾಂಡ್ಯ ಎಂಬ ಪದಗಳಗಳನ್ನು ಹಾಕಿದ್ದಾರೆ. ಈ ಸಂಭ್ರಮವನ್ನು ಹಾರ್ದಿಕ್ ಪಾಂಡ್ಯಾ ತಮ್ಮ ಮಗ ಅಗಸ್ತ್ಯನ ಜೊತೆಗೆ ಹಂಚಿಕೊಂಡಿದ್ದಾರೆ. ಫೋಟೋಗೆ ಕ್ಯಾಪ್ಶನ್ ಕೂಡ ಹಾಕಿದ್ದಾರೆ. ‘My #1.. ನನಗೆ ಎಲ್ಲವೂ ನೀನೆ. ನಾನು ಏನೇ ಮಾಡಿದರು ಅದು ನಿನಗಾಗಿಯೇ ಮಾಡುತ್ತೇನೆ’ ಎಂದು ಬರೆದುಕೊಳ್ಳುವ ಮೂಲಕ ಮಗನ ಮೇಲಿನ ಪ್ರೀತಿ, ಕಾಳಜಿ ಎಂಥದ್ದು ಎಂಬುದನ್ನು ತೋರಿಸಿದ್ದಾರೆ‌.

https://www.instagram.com/p/C9CrvrtNaEA/?igsh=MWFiMnBzNmlxOHBncQ==

ಮಗನ ಜೊತೆಗೆ ವಿಶ್ವಕಪ್ ಗೆಲುವನ್ನು ಸಂಭ್ರಮಿಸಿದ ಹಾರ್ದಿಕ್ ಪಾಂಡ್ಯ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದೆ‌. ಆದರೆ ಇದರ ಜೊತೆಗೆ ಚರ್ಚೆ ಕೂಡ ಶುರುವಾಗಿದೆ. ಹಾರ್ದಿಕ್ ಪಾಂಡ್ಯ ಹಾಗೂ ಮಗನ ಜೊತೆಗೆ ತಾಯಿಯ ಫೋಟೋ ಎಲ್ಲಿಯೂ ಹಾಕಿಲ್ಲ. ಕಳೆದ ಕೆಲವು ದಿನಗಳಿಂದ ನತಾಶ ಹಾಗೂ ಹಾರ್ದಿಕ್ ಪಾಂಡ್ಯ ಸಂಸಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಮಾತಿದೆ. ಇಬ್ಬರು ಡಿವೋರ್ಸ್ ಪಡೆದಿದ್ದಾರೆ ಎಂಬ ವದಂತಿ ಇದೆ. ಈಗ ವಿಶ್ವಕಪ್ ಸಂಭ್ರಮದಲ್ಲೂ ನತಾಶ ಕಾಣಿಸಿಕೊಳ್ಳದೇ ಇರುವುದು ಡಿವೋರ್ಸ್ ವಿಚಾರಕ್ಕೆ ಇನ್ನಷ್ಟು ಪುಷ್ಠಿ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!