Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹರಿದಾಸ ಹಬ್ಬ 2024 | ಚಿತ್ರದುರ್ಗದಲ್ಲಿ ಆಯೋಧ್ಯಾರಾಮನ ಭವ್ಯ ಶೋಭಾಯಾತ್ರೆ

---Advertisement---

ಸುದ್ದಿಒನ್, ಚಿತ್ರದುರ್ಗ ಜ. 26 :  ನಗರದ ಶ್ರೀ ಹರಿವಾಯು ಗುರು ಸೇವಾ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಶ್ರೀರಾಮನಹಬ್ಬ ಶ್ರೀ ಕನಕಪುರಂದಾಸರಾದಿ ಹರಿದಾಸರುಗಳ ಸ್ಮರಣೆಯ ಹರಿದಾಸ ಹಬ್ಬ 2024ರ ಅಂಗವಾಗಿ ಇಂದು ನಗರದಲ್ಲಿ ಆಯೋಧ್ಯಾರಾಮನ ಭವ್ಯ ಶೋಭಾಯಾತ್ರೆ ಕಾರ್ಯಕ್ರಮ ನಡೆಯಿತು.

ನಗರದ ಆನೆಬಾಗಿಲ ಬಳಿಯಲ್ಲಿನ ಶ್ರೀ ಸುವೃಷ್ಟಿ ಪ್ರಾಣದೇವರ ಸನ್ನಿದಾನದಿಂದ ಪ್ರಾರಂಭವಾದ ಶೋಭಾಯತ್ರೆಯೂ ನಗರದ ಸಂತೇಪೇಟೆ ವೃತ್ತ, ಬಿ.ಡಿ.ರಸ್ತೆ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಡಾ.ಕೋಮಲ ಆಸ್ಪತ್ರೆ ಮುಂಭಾಗ ಧರ್ಮಶಾಲಾ ರಸ್ತೆಯ ಮೂಲಕ ಐಯ್ಯಣ್ಣನ ಪೇಟೆಯಿಂದ ವಾಸವಿ ಶಾಲೆಯನ್ನು ತಲುಪಿತು.

ಈ ಶೋಭಾಯಾತ್ರೆಯಲ್ಲಿ ಶ್ರೀರಾಮ ಮತ್ತು ಅಂಜನೇಯನ ಪ್ರತಿಮೆಗಳು, ಶ್ರೀ ಪುರಂದರದಾಸರು, ಶ್ರೀ ವಿಜಯದಾಸರು, ಗೋಪಾಲದಾಸರು, ಜಗನ್ನಾಥದಾಸರು, ಹಾಗೂ ಕನಕದಾಸರರ ಭಾವಚಿತ್ರಗಳನ್ನು ಇಡಲಾಗಿತು. ಜಾನಪದ ಕಲಾಮೇಳಗಳಾದ ಚಂಡೆ, ನಾಗಸ್ವರ, ವೀರಗಾಸೆಯಂತ ವಾದ್ಯಗಳು ಶೋಭಾಯಾತ್ರೆಗೆ ಮೆರಗನ್ನು ನೀಡಿದವು.

ಮೆರಣಿಗೆಯ ನೇತೃತ್ವವನ್ನು ಭೀಮನಕಟ್ಟೆ ಶ್ರೀ ಭೀಮಸೇತು ಮುನಿವೃಂದ ಮಠದ ಶ್ರೀ ರಘುವರೆಂದ್ರತೀರ್ಥ ಶ್ರೀ ಪಾದಂಗಳವರು ವಹಿಸಿದ್ದರು, ಬೆಳ್ಳಿಯ ರಥದಲ್ಲಿ ವಿರಾಜಮಾನರಾಗಿ ಕುಳಿತ್ತಿದ್ದ ಶ್ರೀಗಳು ದಾರಿಯುದ್ದಕ್ಕೂ ಭಕ್ತಾಧಿಗಳಿಗೆ ದರ್ಶನಾರ್ಶಿವಾದವನ್ನು ನೀಡಿದರು, ಅನೇಕ ಭಕ್ತಾಧಿಗಳು ಸಹಾ ಶ್ರೀಗಳ ದರ್ಶನವನ್ನು ಪಡೆದು ಪುನೀತರಾದರು ಅಲ್ಲದೆ ಅವರಿಂದ ಆರ್ಶೀವಾದವನ್ನು ಸಹಾ ಪಡೆದರು. ಈ ಶೋಭಾಯಾತ್ರೆಯಲ್ಲಿ ಮಹಿಳೆಯರು ಪುರುಷರು ಬಿಳಿದಾದ ಸಮವಸ್ತ್ರವನ್ನು ಧರಿಸಿದ್ದರು, ಮತ್ತು ಮಕ್ಕಳು ಸಕ್ರಿಯವಾಗಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment