Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಕರಣ ರದ್ದು ಕೋರಿ ಹರೀಶ್ ಪೂಂಜಾ ಹೈಕೋರ್ಟ್ ಹೋಗುವ ಸಾಧ್ಯತೆ..!

---Advertisement---

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮತ್ತೆ ಎಫ್ಐಆರ್ ದಾಖಲಾಗಿದ್ದು, ಕರ್ತವ್ಯಕ್ಕೆ ಅಡ್ಡಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಹರೀಶ್ ಪೂಂಜಾ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿನ್ನೆ ಹರೀಶ್ ಪೂಂಜಾ ಮನೆಯ ಮುಂದೆ ಹೈಡ್ರಾಮವೇ ನಡೆದಿತ್ತು. ಬಂಧಿಸಲು ಹೋಗಿದ್ದ ಪೊಲೀಸರು ಕೊನೆಗೂ ನೋಟೀಸ್ ನೀಡಿ ವಾಪಾಸ್ ಆಗಿದ್ದರು. ಇಂದು ಬೆಂಗಳೂರಿಗೆ ಬಂದಿರುವ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ನಿನ್ನೆ ಠಾಣಾ ಜಾಮೀನಿನ ಮೇಲೆ ಪೂಂಜಾನನ್ನು ಬಿಡುಗಡೆ ಮಾಡಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ಹರೀಶ್ ಪೂಂಜಾಗೆ ಇವತ್ತು ಮಧ್ಯಾಹ್ನ 12ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಠಾಣೆ ಇನ್ಸ್‌ಪೆಕ್ಟರ್‌ ನೋಟಿಸ್ ನೀಡಿದ್ದರು. ಆದರೆ ಸಾಧ್ಯವಿಲ್ಲ ಅಂತಾ ಮೌಖಿಕವಾಗಿ ತಿಳಿಸಿ ಬಂದ್ದರು. ಅಷ್ಟೇ ಅಲ್ಲ ದಕ್ಷಿಣ ಕನ್ನಡ ಎಸ್‌ಪಿ ಬಗ್ಗೆ ಮಾತನಾಡಿದ್ದಕ್ಕೆ ಸಮರ್ಥಿಸಿಕೊಂಡಿದ್ದರು. ಈ ವೇಳೆ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಈ ವಿಚಾರವನ್ನ ಇಲ್ಲಿಗೆ ಬಿಡಲ್ಲ ಎಂದು ಹೇಳಿದ್ದರು.

 

ಹರೀಶ್ ಪೂಂಜಾ ಬೆಂಬಲಿಗರು ಮೆಲಂತಬೆಟ್ಟುವಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದರು ಅಂತಾ ಆರೋಪಿಸಿ ಬೆಳ್ತಂಗಡಿ ತಹಶಿಲ್ದಾರ್ ದಾಳಿ ಮಾಡಿದ್ದರು. ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಮೇ 18 ರಂದು ದೂರು ನೀಡಿದ್ದರು. ಶಾಸಕ ಹರೀಶ್ ಪೂಂಜಾ ಆಪ್ತರಾದ ಪ್ರಮೋದ್ ಉಜಿರೆ ಮತ್ತು ಶಶಿರಾಜ್ ಶೆಟ್ಟಿ ಮೇಲೆ ದೂರು ದಾಖಲಾಗಿತ್ತು‌. ಬಿಜೆಪಿ ತಾಲೂಕು ಯುವಮೋರ್ಚಾ ಅಧ್ಯಕ್ಷ, ರೌಡಿಶೀಟರ್ ಆಗಿದ್ದ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದರು. ಈ ವಿಚಾರ ತಿಳಿದ ಪೂಂಜಾ ಪೊಲೀಸರ ವಿರುದ್ಧ ಕೆಂಡಮಂಡಲರಾಗಿದ್ದರು. ಮದ್ಯರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...