Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಶ್ವರ್ಯಾ ರೈ ಡಿವೋರ್ಸ್ ಪಡೆಯುವ ಹಂತ ತಲುಪಿಯೇ ಬಿಟ್ಟರಾ..?

Facebook
Twitter
Telegram
WhatsApp

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವರದಿ ನಿನ್ನೆ ಮೊನ್ನೆಯದ್ದಲ್ಲ. ಇಬ್ಬರು ದೂರ ದೂರ ಆಗಿದ್ದಾರೆ ಎಂಬ ವದಂತಿಗಳು ಆಗಾಗ ಕೇಳಿ ಬರುತ್ತಲೇ ಇದೆ. ಇದೀಗ ಮುಂಬೈ ಸಿಟಿಯಲ್ಲಿ ಮತ್ತೆ ಆ ಸುದ್ದಿ ಮುನ್ನೆಲೆಗೆ ಬಂದಿದ್ದು, ಡಿವೋರ್ಸ್ ಘೋಷಣೆ ಒಂದೇ ಬಾಕಿ ಎನ್ನಲಾಗುತ್ತಿದೆ.

ನಟಿ ಐಶ್ವರ್ಯಾ ರೈ ಹಾಗೂ ಜಯಾ ಬಚ್ಚನ್ ನಡುವೆ ಮನಸ್ತಾಪ ಇರುವುದು ಹೊಸದೇನು ಅಲ್ಲ. ಇಬ್ಬರು ಮನೆಯಲ್ಲಿ ಮಾತನಾಡುತ್ತಿಲ್ಲ, ಹಲವು ವರ್ಷಗಳಿಂದ ಇವರ ನಡುವೆ ಮಾತುಕತೆ ನಿಂತು ಹೋಗಿದೆ‌. ಆದರೆ ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯಗೋಸ್ಕರ ಆ ಮನೆಯಲ್ಲಿ ಇದ್ದರು ಎನ್ನಲಾಗುತ್ತಿದೆ. ಕೆಲವೊಂದು ಕಾರ್ಯಕ್ರಮಗಳಲ್ಲಿ ಅಭಿಷೇಕ್ ಹಾಗೂ ಐಶ್ವರ್ಯಾ ರೈ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಆದರೆ ಇತ್ತಿಚೆಗೆ ಒಟ್ಟಿಗೆ ಕಾಣಿಸಿಕೊಂಡಿರುವುದು ಕಡಿಮೆ. ಈ ಎಲ್ಲವೂ ಏನೋ ಸರಿ ಇಲ್ಲ ಎಂಬುದಕ್ಕೆ ಪುಷ್ಠಿ ನೀಡುತ್ತಿವೆ.

ಬಿಟೌನ್ ನಲ್ಲಿ ಚರ್ಚೆಯಾಗುತ್ತಿರುವ ಸುದ್ದಿಯ ಪ್ರಕಾರ, ಈಗಾಗಲೇ ಐಶ್ವರ್ಯಾ ರೈ, ಬಚ್ಚನ್ ಕುಟುಂಬದಿಂದ ದೂರವಾಗಿದ್ದಾರೆ ಎನ್ನಲಾಗಿದೆ. ಅತ್ತೆಯ ಜೊತೆಗಿನ ಹೊಂದಾಣಿಕೆ ಕಷ್ಟವಾಗಿದ್ದು, ತವರು ಮನೆ ಸೇರಿದ್ದಾರೆ ಎನ್ನಲಾಗಿದೆ. ಇನ್ನು ಅಧಿಕೃತವಾಗಿ ಡಿವೋರ್ಸ್ ಘೋಷಣೆ ಮಾಡಿಲ್ಲ, ಅದೊಂದೇ ಬಾಕಿ ಅಂತಾನೂ ಸುದ್ದಿಯಾಗುತ್ತಿದೆ. ಬಾಲಿವುಡ್ ಕ್ಯೂಟ್ ಕಪಲ್ ಸಾಲಿನಲ್ಲಿ ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಕೂಡ ಸೇರ್ಪಡೆಯಾಗುತ್ತಾರೆ. ಇಬ್ಬರಿಗೆ ಮುದ್ದಾದ ಮಗಳು ಆರಾಧ್ಯ ಇದ್ದಾಳೆ. ಅಮ್ಮನ ಜೊತೆಗೆ ಆಗಾಗ ಕ್ಯಾಮರಾ ಕಣ್ಣಿಗೂ ಬೀಳುವ ಆರಾಧ್ಯ, ಮುಗ್ಧತೆಗೆ ಸಾಕಷ್ಟು ಫ್ಯಾನ್ಸ್ ಕೂಡ ಇದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!