Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಂಗ್ರೆಸ್ ನವರ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ : ಯತ್ನಾಳ್ ಬಗ್ಗೆ ರೇಣುಕಾಚಾರ್ಯ ಹಿಂಗ್ಯಾಕಂದ್ರು..?

---Advertisement---

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರನ್ನು ಕೆಳಗೆ ಇಳಿಸಬೇಕೆಂದು ಯತ್ನಾಳ್ ಬಣ ಪ್ರಯತ್ನ ಪಡುತ್ತಿದೆ. ಇದರ ನಡುವೆ ಸ್ವಾಮೀಜಿಗಳನ್ನು ಪೇಮೆಂಟ್ ಸ್ವಾಮೀಜಿ ಎಂದಿದ್ದಾರೆ. ಈ ಸಂಬಂಧ ಮಾತನಾಡಿದ ರೇಣುಕಾಚಾರ್ಯ, ಯತ್ನಾಳ್ ವಿರುದ್ಧ ಕೆಂಡಕಾರಿದ್ದಾರೆ.

ಸ್ವಾಮಿಗಳಿಗೆ ಪೇಮೆಂಟ್ ಅಂದ್ರೆ ಇಡೀ ವೀರಶೈವ ಸಮುದಾಯದ ಸ್ವಾಮಿಗಳಿಗೆ ಮಾಡಿದಂತ ಅಪಮಾನವಾಗಿದೆ. ಕ್ಷಮೆ ಕೇಳಬೇಕಾಗುತ್ತದೆ. ಪೇಮೆಂಟ್ ಸ್ವಾಮಿಗಳಾ..? ಯಡಿಯೂರಪ್ಪ ವೀರಶೈವ ಲಿಂಗಾಯತರ ನಾಯಕ ಅಲ್ಲ, ಯಡಿಯೂರಪ್ಪ ಮಾಸ್ ಲೀಡರ್. ಜಾತ್ಯಾತೀತ ಆಯ್ಕೆ. ಎಲ್ಲಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಟ್ಟವರು ಯಡಿಯೂರಪ್ಪ. ಯಾವಾಗ ಯಡಿಯೂರಪ್ಪ ಅವರನ್ನು ಇಳಿಸಿ ಮೋಸ ಮಾಡಿದ್ರಲ್ಲ, ಆಗ ವೀರಶೈವ ಲಿಂಗಾಯತರು ಉಲ್ಟಾ ಹೊಡೆದರು.

ವೀರಶೈವ ಲಿಂಗಾಯತರು ಅಷ್ಟೇ ಅಲ್ಲ ಎಲ್ಲಾ ಸಮುದಾಯದವರು ಉಲ್ಟಾ ಹೊಡೆದರು. ಪಕ್ಷವನ್ನಿ ಕಟ್ಟಿ ಬೆಳೆಸಿದ ನಾಯಕನಿಗೆ ಮೋಸ ಮಾಡಿದ್ದಕ್ಕೆ ಉಲ್ಟಾ ಹೊಡೆದರು. ಮೋದಿ ಅವರು ಮತ್ತೆ ಅವರನ್ನು ಬಿಜೆಪಿಗೆ ಕರೆದುಕೊಂಡು ಬಂದರು. ಒಂದು ಪಕ್ಷ ಗೆಲ್ಲುವುದಕ್ಕೆ ಎಲ್ಲಾ ಅಮುದಾಯಗಳು ಬೇಕು. 2018ರಲ್ಲೂ ಯಡಿಯೂರಪ್ಪ ಅವರಿಗಾಗಿಯೇ ಮತ ಕೊಟ್ಟರು.

 

ನಿನ್ನ ಬಂಡವಾಳವನ್ನೆಲ್ಲ ಬಿಚ್ತೀವಿ ಅಂತ ಹೇಳಿದ್ದೀನಿ. ಬಸ್ ನಲ್ಲಿ ಟಿಕೆಟ್ ಹರಿತಾ ಇದ್ದದ್ದು ಗೊತ್ತಿದೆ. ಎಲ್ಲವನ್ನು ಬಿಚ್ಚಿಡ್ತೇನೆ. ನಾವೇನು ಆಗರ್ಭ ಶ್ರೀಮಂತರ ಮಕ್ಕಳಲ್ಲ. ಸಮಯ ಬಂದಾಗ ಎಲ್ಲವನ್ನು ಹೇಳ್ತೇನೆ. ಒಂದೇ ಒಂದು ಅಜೆಂಡಾ ಅಂದ್ರೆ ಬಿಜೆಪಿಗೆ ವಿರುದ್ಧವಾಗಿ ಕಾಂಗ್ರೆಸ್ ನವರು ಸುಪಾರಿ ಕೊಟ್ಟವರೆ. ಅವರ ಜೊತೆಗೆ ಒಳ ಹೊಂದಾಣಿಕೆ ಮಾಡಿಕೊಂಡು ಇದಾರೆ. ಇವರು ಪೇಮೆಂಟ್ ಗಿರಾಕಿಗಳು. 12 ತಾರೀಖು ನಿರ್ಣಯ ಮಾಡಿರುವ ಸಭೆಯನ್ನು ಸೇರಿಯೇ ಸೇರ್ತೀವಿ. ದೆಹಲಿಗೂ ಹೋಗ್ತೀವಿ ಇದನ್ನ ನಿಲ್ಲಿಸಬೇಕು ಅಂತ ಹೇಳಿಯೇ ಹೇಳ್ತೀವಿ. ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಮಾತನಾಡಿದ್ರೆ ಜನ ಸಹಿಸಲ್ಲ. ವಿಜಯೇಂದ್ರ ಅವರನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಿದ್ರೆ 10 ಸ್ಥಾನವನ್ನೂ ಗೆಲ್ಲಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment