Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಜೆಪಿಯ ವೋಟ್ ಬ್ಯಾಂಕ್ ಅನ್ನೇ ಕದಿಯುವ ಪ್ಲ್ಯಾನ್ ಮಾಡಿದೆಯಾ ಕಾಂಗ್ರೆಸ್..?

---Advertisement---

 

ಬೆಂಗಳೂರು: ಸದ್ಯ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಬಿಸಿ ಜೋರಾಗಿಯೇ ಸುಡುತ್ತಿದೆ. ಮೂರು ಪಕ್ಷಗಳಿಂದ ಭರ್ಜರಿ ಮತ ಬೇಟೆ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ಈ ಬಾರಿ ಕಮಲದ ಮುಂದೆ ಗೆದ್ದು ಬೀಗಬೇಕೆಂದು ಪಣ ತೊಟ್ಟಿದೆ. ಅದೇ ಕಾರಣಕ್ಕೆ ಜನರ ಬಳಿ ಹೋಗಿ ಮತ ಕೇಳುತ್ತಿದೆ. ಇದರ ನಡುವೆ ಬಿಜೆಪಿಯ ವೋಟ್ ಬ್ಯಾಂಕ್ ಆಗಿರುವ ಲಿಂಗಾಯತ ಸಮುದಾಯವನ್ನು ತನ್ನ ಸೆಳೆಯುತ್ತದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ನಿನ್ನೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆದಿದೆ. ಈ ಸಭೆಯಲ್ಲಿ ಲಿಂಗಾಯತ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳು ಒಟ್ಟು ಸೇರಿದ್ದರು. ಶ್ಯಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ, ಎಂಬಿ ಪಾಟೀಲ್ ಸೇರಿದಂತೆ ಹಲವು ಮುಖಂಡರು ಸೇರಿದ್ದರು. ಎರಡೂವರೆ ಗಂಟೆಗೂ ಹೆಚ್ಚು ಕಾಲ ಈ ಸಭೆ ನಡೆದಿದೆ‌. ಈ ಬಾರಿಯ ಚುನಾವಣೆಯಲ್ಲಿ ಲಿಂಗಾಯತ ಸಮುದಾಯಕ್ಕೆ ಹೆಚ್ಚು ಟಿಕೆಟ್ ನೀಡಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ. ಸುಮಾರು 50ಕ್ಕೂ ಹೆಚ್ಚು ಟಿಕೆಟ್ ನೀಡಬೇಕೆಂದು ಕೇಳಿಕೊಂಡಿದ್ದಾರೆ.

ಯಾಕಂದ್ರೆ ಕೆಲವೊಂದು ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿದೆ. ಸುಲಭವಾಗಿ ಆ ಕ್ಷೇತ್ರಗಳನ್ನು ಗೆಲ್ಲಬೇಕು ಅಂದ್ರೆ ಲಿಂಗಾಯತ ಸಮುದಾಯಕ್ಕೆ ಮತ ನೀಡಬೇಕಾಗಿದೆ. ಈ ನಿರ್ಧಾರವನ್ನು ಹೈಕಮಾಂಡ್ ಮುಂದೆಯೂ ಇಡಲು ತೀರ್ಮಾನ ಮಾಡಲಾಗಿದೆ. ಈಗಾಗಲೇ ಟಿಕೆಟ್ ಗಾಗಿ 210 ಆಕಾಂಕ್ಷಿಗಳು ಅರ್ಜಿ ಸಲ್ಲಿಕೆ ಮಾಡಿದ್ದು, 74 ಮಂದಿಯ ಹೆಸರು ಶಾರ್ಟ್ ಲೀಸ್ಟ್ ಆಗಿದೆ ಎನ್ನಲಾಗುತ್ತಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...