ರಾಜ್ಯ ಬಿಜೆಪಿ ನಾಯಕರಿಗೆ ಶುರುವಾಗಿದೆಯಾ ಟಿಕೆಟ್ ಸಿಗದೆ ಇರುವ ಭಯ..?

suddionenews
1 Min Read

ಹುಬ್ಬಳ್ಳಿ: ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಹೊಸ ಮ್ಯಾಜಿಕ್ ಮಾಡಿದೆ. ಹಿರಿಯರಿಗೆಲ್ಲಾ ಕೊಕ್ ನೀಡಿ ಯುವಕರಿಗೆ ಟಿಕೆಟ್ ನೀಡಿದೆ. ಹೀಗಾಗಿ ಗುಜರಾತ್ ನಲ್ಲಿ ಬಿಜೆಪಿಗೆ ಮತ್ತೆ ಮತ್ತೆ ಗೆಲುವಿಗೆ ಅವಕಾಶ ಸಿಕ್ಕಿದಂತಾಗಿದೆ. ಇದೆ ಸ್ಟಾಟರ್ಜಿಯನ್ನು ಇದೀಗ ಕರ್ನಾಟಕದ ಮೇಲೂ ಹೇರಲು ಪ್ಲ್ಯಾನ್ ನಡೆಸಿದೆ ಎನ್ನಲಾಗಿದೆ.

ಬಿಜೆಪಿ ಗೆಲ್ಲುವ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಮಣೆ ಹಾಕಬೇಕು ಎಂಬುದು ಬಿಜೆಪಿ ಪ್ಲ್ಯಾನ್ ಹೀಗಾಗಿ ಟಿಕೆಟ್ ಆಕಾಂಕ್ಷಿಗಳಿಗೆ ಎದೆಯಲ್ಲಿ ನಡುಕ ಶುರುವಾಗಿದೆ. ಟಿಕೆಟ್ ಸಿಗುತ್ತೆ ಎಂದು ಕಾಯುತ್ತಾ ಕೂತವರಿಗೆ ಭಯ ಕಾಡುತ್ತಿದೆ. ಈ ಹಿನ್ನೆಲೆ ಟಿಕೆಟ್ ಆಕಾಂಕ್ಷಿಗಳೆಲ್ಲಾ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಹೋಗಿದ್ದಾರೆ.

ಹುಬ್ಬಳ್ಳಿಯ ಮಯೂರ ಎಸ್ಟೇಟ್ ನಲ್ಲಿರುವ ಪ್ರಹ್ಲಾದ್ ಜೋಶಿ ಅವರ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳು ದೌಡಾಯಿಸಿದ್ದಾರೆ. ಉತ್ತರ ಕರ್ನಾಟಕದ ಹಲವು ಮುಖಂಡರು ಭೇಟಿ ನೀಡಿದ್ದು ಟಿಕೆಟ್ ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್ ಜೊತೆ ಪ್ರಹ್ಲಾದ್ ಜೋಶಿ ಹೆಚ್ಚು ಆತ್ಮೀಯರಾಗಿರುವ ಕಾರಣ ಅವರ ಮೂಲಕ ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *