Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರೇಣುಕಾಚಾರ್ಯ ಅವರನ್ನು ಪಕ್ಷದಿಂದ ಹೊರ ಹಾಕುವಂತೆ ಹೈಕಮಾಂಡ್ ಸೂಚಿಸಿದೆಯಾ..?

---Advertisement---

 

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಕೆಲವು ಭಿನ್ನಾಭಿಪ್ರಾಯ ಹೊಗೆಯಾಡುತ್ತಿದೆ. ಕೆಲವರು ಬಂಡಾಯವನ್ನೇ ಎದ್ದಿದ್ದಾರೆ. ದಾವಣಗೆರೆಯ ವಿಚಾರದಲ್ಲೂ ಅಷ್ಟೇ ಟಿಕೆಟ್ ವಿಚಾರಕ್ಕೆ ರೇಣುಕಾಚಾರ್ಯ ಬೇಸರ ಮಾಡಿಕೊಂಡು ಕೂತಿದ್ದಾರೆ. ಸಂಸದ ಸಿದ್ದೇಶ್ವರ ಪತ್ನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಕೋಪ ಹೊರಗೆ ಹಾಕಿದ್ದಾರೆ. ಅಷ್ಟೇ ಅಲ್ಲ ಅತೃಪ್ತರ ತಂಡ ಕಟ್ಟಿಕೊಂಡು ಬಹಿರಂಗವಾಗಿಯೇ ಸಭೆ ನಡೆಸಿದ್ದಾರೆ. ರೇಣುಕಾಚಾರ್ಯರ ಟೀಂ ಹೈಕಮಾಂಡ್ ನಾಯಕರಿಗೆ ಟಿಕೆಟ್ ಬದಲಿಸುವಂತೆ ಸೂಚನೆ ನೀಡಿದೆ. ಹೀಗಾಗಿ ಹೈಕಮಾಂಡ್ ನಿಂದ ಎಚ್ಚರಿಕೆಯ ಸಂದೇಶ ಸಿಕ್ಕಿದೆ‌.

 

ಹೈಕಮಾಂಡ್ ಸೂಚನೆ ಮೇರೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ರೇಣುಕಾಚಾರ್ಯ ಅವರಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ. ಪಕ್ಷದಲ್ಲಿ ಇದ್ದು ಕೆಲಸ ಮಾಡುವುದಾದರೆ ಮಾಡು. ಹೈಕಮಾಂಡ್ ನಾಯಕರು ಕರೆ ಮಾಡಿ ಪಕ್ಷದಿಂದ ಹೊರ ಹಾಕುವಂತೆ ಸೂಚಿಸಿದ್ದಾರೆ‌. ಇಲ್ಲ ನೀನು ಬೇರೆ ಪಕ್ಷಕ್ಕೆ ಹೋಗುವುದಿದ್ದರು ಹೋಗು ಎಂದು ನೇರವಾಗಿಯೇ ಹೇಳಿದ್ದಾರೆಂದು ಮೂಲಗಳಿಂದ ಮಾಹಿತಿ ದೊರೆತಿದೆ.

 

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಹಲವು ಸಮಸ್ಯೆಗಳು ತಲೆದೂರಿದ್ದು, ಅದನ್ನು ಸರಿ ಪಡಿಸುವಂತೆ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಈ ಸಂಬಂಧ ದಾವಣಗೆರೆ ಬಿಜೆಪಿ ನಾಯಕರು ಕರೆ ಮಾಡಿ, ರಾಜಿ ಸಂಧಾನ ಮಾಡಿಸುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ಬಿವೈ ವಿಜಯೇಂದ್ರ ಅವರು ಸುಮ್ಮನೆ ಆಗಿದ್ದರು ಇದೇ ವಿಚಾರವಾಗಿ ಇದೀಗ ಬಿಎಸ್ ಯಡಿಯೂರಪ್ಪ ಅವರು ರೇಣುಕಾಚಾರ್ಯ ಅವರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್ ಅಷ್ಟೊಂದು ಕೋಪ ಮಾಡಿಕೊಳ್ಳುವುದಕ್ಕೆ ಕೆಲವೊಂದು ಕಾರಣಗಳಿವೆ. ಅದರಲ್ಲೂ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅತೃಪ್ತರ ತಂಡ ರೆಡಿಯಾಗಿತ್ತು, ಆ ತಂಡವನ್ನು ಕಟ್ಟಿದ್ದೇ ರೇಣುಕಾಚಾರ್ಯ ಎಂಬ ಮಾಹಿತಿ ಹೈಕಮಾಂಡ್ ಗೆ ಸಿಕ್ಕ ಬೆನ್ನಲ್ಲೇ ಕೋಪಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...