ಈ ಪ್ರಶ್ನೆ ಮೂಡುವುದಕ್ಕೆ ಕಾರಣ ತುಮಕೂರಿನಲ್ಲಿ ಟಿಕೆಟ್ ಬಗ್ಗೆ ನೀಡುತ್ತಿರುವ ಹೇಳಿಕೆಗಳು. ಕಳೆದ ವಿಧಾನಸಭಾ ಚುನಾವಣೆಯಿಂದ ಹೊಂದಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಲೋಕಸಭಾ ಚುನಾವಣೆಯಲ್ಲೂ ತಮ್ಮ ಮೈತ್ರಿಯನ್ನು ಮುಂದುವರೆಸಿದಾವೆ. ಯಾವ್ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆ ಟಿಕೆಟ್ ಕೊಡಬೇಕು, ಇನ್ಯಾವ ಕ್ಷೇತ್ರದಲ್ಲಿ ಬಿಜೆಪಿಯನ್ನ ನಿಲ್ಲಿಸಬೇಕು ಎಂಬ ಆಲೋಚನೆ ಬಿಜೆಪಿ ಹಾಗೂ ಜೆಡಿಎಸ್ ವರಿಷ್ಠರ ಮೂಲಕವೇ ಬರುವುದು. ಚುನಾವಣೆಗೂ ಇನ್ನು ಬಹಳ ಸಮಯವಿದೆ. ಎರಡೂವರೆ ವರ್ಷ ಸಮಯವಿರುವಾಗಲೇ ಟಿಕೆಟ್ ಗಾಗಿ ಪೈಪೋಟಿ ಹೆಚ್ಚಾಗಿದೆ.
ಈಗ ಟಿಕೆಟ್ ಫೈಟ್ ಶುರುವಾಗಿರೋದು ತುಮಕೂರು ಜಿಲ್ಲೆಯ ತುರುವೆಕರೆ ಭಾಗದಲ್ಲಿ. ಬಿಜೆಪಿ ಮತ್ತು ಜೆಡಿಎಸ್ ಟಿಕೆಟ್ ಪೈಪೋಟಿ ಈಗಲೇ ಶುರುವಾಗಿದೆ. ತುರುವೆಕೆರೆ ಕ್ಷೇತ್ರದಲ್ಲಿ ಈ ಪೈಪೋಟಿ ಶುರುವಾಗಿದ್ದು ಬಿಜೆಪಿಯ ಮಸಾಲೆ ಜಯರಾಮ್ ಹಾಗೂ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ನಡುವೆ ಈ ಪೈಪೋಟಿ ಏರ್ಪಟ್ಟಿದೆ. ಮಸಾಲೆ ಜಯರಾಮ್ ಬಿಜೆಪಿಯ ಮಾಜಿ ಶಾಸಕರಾಗಿದ್ದಾರೆ. ಕ್ಷೇತ್ರದಲ್ಲಿ ನಾನೇ ಮುಂದಿನ ಅಭ್ಯರ್ಥಿ ಎಂಬುದಾಗಿ ಓಡಾಡ್ತಾ ಇದಾರೆ. ಅಷ್ಟೇ ಅಲ್ಲ ಅದು ಸತ್ಯ ಎಂದೇ ಹೇಳಿಕೆ ನೀಡಿದ್ದಾರೆ.
ನನಗೆ ರಾಜ್ಯ ಹಾಗೂ ಕೇಂದ್ರ ನಾಯಕರು ಕರೆ ಮಾಡಿದ್ದಾರೆ. ಮುಂದಿನ ದಿನದಲ್ಲಿ ಯಾವುದೇ ಒತ್ತಡ ಇಲ್ಲ. ನಾನೇ ಅಭ್ಯರ್ಥಿ ಅಂತ ಆತ್ಮವಿಶ್ವಾಸದಲ್ಲಿ ಹೇಳಿದ್ದಾರೆ. ಜಯರಾಮ್ ಅವರ ಈ ನಡವಳಿಕೆ, ಹೇಳಿಕೆಗಳನ್ನ ಕೇಳಿ ಕೃಷ್ಣಪ್ಪ ಅವರು ಗೊಂದಲದಲ್ಲಿದ್ದಾರೆ. ಸದ್ಯ ಶಾಸಕರಾಗಿರುವ ಕೃಷ್ಷಪ್ಪ ಅವರು ಸಹಜವಾಗಿಯೇ ಮುಂದಿನ ಚುನಾವಣೆಗೂ ಟಿಕೆಟ್ ಆಕಾಂಕ್ಷಿಯಾಗಿರುತ್ತಾರೆ. ಹಾಗಾದ್ರೆ ಮಸಾಲೆ ಜಯರಾಮ್ ಏನು ಹೇಳಿದ್ರು ಅನ್ನೋದನ್ನ ನೋಡಿ, ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ ಮುಂದಿನ ದಿನಗಳಲ್ಲಿ ನಾನು ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಅನ್ನೋದು ಅಷ್ಟೇ ಸತ್ಯ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








