Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಮ್ಮ ಗಮನಕ್ಕೆ ಬಾರದೆ ನಿಮ್ಮ “ಬ್ರದರ್” ನಿಮ್ಮನ್ನೂ ಮೀರಿಸಿದ್ದಾರಾ? : ಯತ್ನಾಳ್ ಪ್ರಶ್ನೆ

---Advertisement---

 

ಬಿಜೆಪಿ ಸರ್ಕಾರವಿದ್ದಾಗ ಭ್ರಷ್ಟಾಚಾರದ ಆರೋಪ ದೊಡ್ಡಮಟ್ಟಕ್ಕೆ ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷ ಕೂಡ ಭ್ರಷ್ಟಾಚಾರದ ಪಕ್ಷ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿತ್ತು. ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಾಗಿರುವಾಗಲೇ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಅದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ.

ಈ ಸಂಬಂಧ ತನಿಖೆ ಮಾಡುವ ವಿಚಾರಕ್ಕೆ ಬಿಜೆಪಿಯ ಬಸನಗೌಡ ಪಾಟೀಲದ ಯತ್ನಾಳ್ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ವೀಟ್ ಮಾಡುವ ಮೂಲಕ ನಿಮ್ಮ ಬ್ರದರ್ ವಿರುದ್ಧ ತನಿಖೆ ಮಾಡಿಸ್ತೀರಾ ಎಂದು ಕೇಳಿದ್ದಾರೆ.

ಬಿಜೆಪಿ ಸರ್ಕಾರದ ಹಗರಣಗಳನ್ನು ನ್ಯಾಯ ಮೂರ್ತಿಯವರ ನೇತೃತ್ವದ ಆಯೋಗದ ಮೂಲಕ ತನಿಖೆ ಮಾಡಿಸುತ್ತೇವೆ ಎಂದಿದ್ದ ಸಿದ್ದರಾಮಯ್ಯನವರು ಈಗ ಗುತ್ತಿಗೆದಾರರು ಆರೋಪ ಮಾಡಿರುವ ಅವರ “ಬ್ರದರ್” ವಿರುದ್ಧ ತನಿಖೆ ಮಾಡಿಸುತ್ತಾರಾ ?

ಗುತ್ತಿಗೆದಾರರು ನೊಣವಿನಕೆರೆ ಅಜ್ಜಯ್ಯನವರ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲೆಸಿರುವುದು ನೋಡಿದರೆ “ಬ್ರದರ್” ಡಿಮ್ಯಾಂಡ್ ಗುತ್ತಿಗೆದಾರರಿಗೆ ಬಹಳ ಸಂಕಷ್ಟಕ್ಕೆ ದೂಡಿದೆ.

ಲೋಕಸಭೆ ಚುನಾವಣೆಗೆ ಎಷ್ಟು ಫಿಕ್ಸ್ ಮಾಡಿದ್ದೀರಿ @siddaramaiah ನವರೇ? ಅಥವಾ ನಿಮ್ಮ ಗಮನಕ್ಕೆ ಬಾರದೆ ನಿಮ್ಮ “ಬ್ರದರ್” ನಿಮ್ಮನ್ನೂ ಮೀರಿಸಿದ್ದಾರಾ? ಕ್ರಮಕೈಗೊಳ್ಳುವಿರಾ? ಅಥವಾ ಅವರು ಗುತ್ತಿಗೆದಾರರೇ ಅಲ್ಲ ಅಂತ ಸರ್ಟಿಫಿಕೇಟ್ ನೀಡುತ್ತೀರಾ! ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...