Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮೇ 30ಕ್ಕೆ ಹಾಸನ ಚಲೋ..!

---Advertisement---

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ. ಆದರೆ ಪ್ರಜ್ವಲ್ ರೇವಣ್ಣ ಇನ್ನು ವಿದೇಶದಿಂದ ಭಾರತಕ್ಕೆ ಬಂದಿಲ್ಲ. ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಇದೀಗ ಹಾಸನ ಚಲೋ ನಡೆಸಲಿದ್ದಾರೆ. ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟದಿಂದ ಈ ಚಲೋ ನಡೆಯಲಿದೆ. ಮಹಿಳೆಯರ ಘನತೆ ಉಳಿಸಿ ಹಾಸನ ಗೌರವ ಕಾಪಾಡಿ ಎಂಬ ಸ್ಲೋಗನ್ ನೊಂದಿಗೆ ಹಾಸನ ಚಲೋ ನಡೆಸಲಿದ್ದಾರೆ.

ಸಂಘಟನೆಯ ಮುಖಂಡ ಧರ್ಮೇಶ್ ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಮೇ 30ಕ್ಕೆ ಬೃಹತ್ ಹೋರಾಟ ನಡೆಯಲಿದೆ. ಇದರಲ್ಲಿ ಅನೇಕ ಹೋರಾಟಗಾರರು, ಸಾಹಿತಿಗಳು, ಚಿಂತಕರು ಹಾಗೂ ಪ್ರಗತಿಪರರು ಭಾಗಿಯಾಗಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ವಿಡಿಯೋ ಬಹಿರಂಗ ಮಾಡಿದವರ ವಿರುದ್ಧವೂ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಹೋರಾಟದ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರಿ ಪ್ರಾಯೋಜಿತ ಹೋರಾಟ ಎಂದು ಹೇಳಿದ್ದಾರೆ. ಈ ಮಾತನ್ನು ಹಿಂತೆಗೆದುಕೊಳ್ಳಬೇಕು. ಇದು ಬೇಜವಾಬ್ದಾರಿಯ ಹೇಳಿಕೆ. ಹಾಗಿದ್ದರೆ ಅವರು ಮಹಿಳೆಯರ ಪರವಾಗಿ ಇಲ್ಲವೇ..? ಇಷ್ಟೊಂದು ದೊಡ್ಡ ಹಗರಣವಾಗಿರುವಾಗ ಅವರ ಈ ಹೇಳಿಕೆಗಳನ್ನು ನಿರೀಕ್ಷೆ ಮಾಡಿರಲಿಲ್ಲ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹೊರ ಬೀಳುತ್ತಿದ್ದಂತೆ ವೋಟ್ ಹಾಕಿ ಎಸ್ಕೇಪ್ ಆದವರು, ಇನ್ನು ಅವರ ಸುಳಿವಿಲ್ಲ. ಫಲಿತಾಂಶ ಬಂದ ಮೇಲೆ ಅವರು ವಾಪಾಸ್ಸಾಗುತ್ತಾರೆಂಬ ಮಾತಿದೆ. ಆದರೆ ಅದಕ್ಕೂ ಮುನ್ನ ಅವರನ್ನು ಬಂಧಿಸಿ, ಕಠಿಣ ಕ್ರಮ ನೀಡಬೇಕೆಂದು ಸಂಘಟನೆಗಳು ಆಗ್ರಹಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...