Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನದಲ್ಲಿ ಹೆಂಡತಿ.. ಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಪಾಪಿ : ಅದೃಷ್ಟವಶಾತ್ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ..!

Facebook
Twitter
Telegram
WhatsApp

 

ಹಾಸನ : ಜಿಲ್ಲೆಯ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಕ್ಕಳನ್ನು ನೋಡುವುದಕ್ಕೆ ಬಿಡಲಿಲ್ಲ ಎಂಬ ಕಾರಣಕ್ಕೆ ಮನೆಗೆ ಬೆಂಕಿ ಹಚ್ಚಿದ್ದಾನೆ ಪಾಪಿ ತಂದೆ. ಮಕ್ಕಳು ಚೆನ್ನಾಗಿ ಇರಲಿ ಎಂದು ತಂದೆ ತಾಯಂದಿರು ಬಯಸುತ್ತಾರೆ. ಆದ್ರೆ ಇಲ್ಲಿ ತಂದೆ ಎನಿಸಿಕೊಂಡ ಭೂಪ ಮನೆಯೊಳಗೆ ಮಕ್ಕಳು ಇದ್ದಾರೆ ಎಂಬುದು ಗಮನಕ್ಕೆ ಇದ್ದರು ಕೂಡ, ರಂಗಸ್ವಾಮಿ ಎಂಬಾತ ಮನೆಗೆ ಬೆಂಕಿ ಹಚ್ಚಿದ್ದಾನೆ.

ಬೆಂಕಿ ಹಚ್ಚಿದ ಕೂಡಲೇ ಮನೆಯೊಳಗಿದ್ದವರ ಅರಿವಿಗೆ ಬಂದಿದೆ. ತಕ್ಷಣ ಕಿರುಚಿಕೊಂಡಿದ್ದು, ಅಕ್ಕಪಕ್ಕದ ಮನೆಯವರೆಲ್ಲ ಓಡಿ ಬಂದಿದ್ದಾರೆ. ಹೊತ್ತಿದ್ದ ಬೆಂಕಿಯನ್ನು ನಂದಿಸಿ, ಮನೆಯೊಳಗೆ ಬೆಂಕಿಯಲ್ಲಿ ಸಿಕ್ಕಿಬಿದ್ದಿದ್ದವರನ್ನು ಕಾಪಾಡಲಾಗಿದೆ. ಮನೆಯೊಳಗಿದ್ದವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೀತಾ ಮತ್ತು ರಂಗಸ್ವಾಮಿ ನಾಲ್ಕು ತಿಂಗಳಿನಿಂದ ಬೇರೆ ಬೇರೆಯಾಗಿ ವಾಸವಾಗಿದ್ದರು. ಇಬ್ಬರು ಮಕ್ಕಳಾದ ಚಿರಂತನ್ ಹಾಗೂ ನಂದನ್ ಕೂಡ ತಾಯಿಯ ಜೊತೆಗೆ ವಾಸ ಮಾಡುತ್ತಿದ್ದರು. ರಂಗಸ್ವಾಮಿ ಕೂಡ ಮಕ್ಕಳನ್ನು ಅಲ್ಲಿಯೇ ಹೋಗಿ ನೋಡಿಕೊಂಡು ಬರುತ್ತಿದ್ದರು. ನಿನ್ನೆ ಕೂಡ ಮಕ್ಕಳನ್ನು ನೋಡುವುದಕ್ಕೆ ಹೋದಾಗ ಏನು ನಡೆದಿತ್ತೋ ಏನೋ ತಾಯಿ ಗೀತಾ ಮಕ್ಕಳನ್ನು ನೋಡುವುದಕ್ಕೆ ಬಿಟ್ಟಿಲ್ಲ.

ಇದರಿಂದ ಕೋಪಗೊಂಡ ರಂಗಸ್ವಾಮಿ, ಅಲ್ಲಿಂದ ಸೀದಾ ಪೆಟ್ರೋಲ್ ಬಂಕ್ ಗೆ ಹೋಗಿ, ಪೆಟ್ರೋಲ್ ತಂದಿದ್ದಾನೆ. ಎಲ್ಲರೂ ಮಲಗಿದ್ದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರಿಂದ ಮಕ್ಕಳು ಮತ್ತು ಹೆಂಡತಿ ಗಾಯಗೊಂಡಿದ್ದಾರೆ. ಈ ಸಂಬಂಧ ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ನಾಳೆಯಿಂದ ಮೊದಲ ಹಂತದ ಚುನಾವಣೆ ಆರಂಭ : ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ

ಲೋಕಸಭಾ ಚುನಾವಣೆಯ ಕಾವು ಈಗಾಗಲೇ ದೇಶದೆಲ್ಲೆಡೆ ಹಬ್ಬಿದೆ. ನಾಳೆಯಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಲಿದೆ. ಒಟ್ಟು 7 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಕ್ಷೇತ್ರಗಳಿಗೆ ಇಂದು

error: Content is protected !!