Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏನ್ ಮಾಡೋಕೆ ಆಗುತ್ತೆ. ಎಲ್ರಿಗೂ ನಾವೇ ಚೂರಿ ಹಾಕ್ತೀವಿ : ಹೆಚ್ ಡಿ ಕುಮಾರಸ್ವಾಮಿ

Facebook
Twitter
Telegram
WhatsApp

 

ತುಮಕೂರು : ಜೆಡಿಎಸ್ ನಿಂದ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಉಚ್ಚಾಟನೆ ವಿಚಾರವಾಗಿ ನಗರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಅದು ಮುಗಿದುಹೋದ ಕಥೆ, ಅದರ ಬಗ್ಗೆ ಮಾತನಾಡಲ್ಲ ಎಂದಿದ್ದಾರೆ.

ಹೆಚ್ಡಿಕೆ ನನ್ನ ಬೆನ್ನಿಗೆ ಚೂರಿ ಹಾಕಿದ್ರು ಅಂತಾ ಆರೋಪ ಮಾಡಿದ್ದ ಶ್ರೀನಿವಾಸ್‌ ಮಾತಿಗೆ ಉತ್ತರ ನೀಡಿರುವ ಕುಮಾರಸ್ವಾಮಿ, ಅವರ ಬೆನ್ನಿಗೆ ಚೂರಿ ಹಾಕಿದ್ದು ನಾನೇ, ಏನ್ ಮಾಡೋಕೆ ಆಗುತ್ತೆ. ಎಲ್ರಿಗೂ ನಾವೇ ಚೂರಿ ಹಾಕ್ತೀವಿ ಎಂದು ಟಾಂಗ್ ಕೊಟ್ಟಿದ್ದಾರೆ. ಅದು ಮುಗಿದು ಹೋದ ಅಧ್ಯಾಯ, ಮತ್ತೆ ಚರ್ಚೆ ಮಾಡೋಕೆ ಹೋಗಲ್ಲಾ. ಯಾರ್ಯಾರು ಏನ್ ಮಾಡಿದ್ದಾರೆ ಅಂತಾ ಜನ ತೀರ್ಮಾನ ಮಾಡ್ತಾರೆ ಎಂದಿದ್ದಾರೆ.

ಅಗ್ನಿಪಥ್ ಯೋಜನೆ ವಿಚಾರವಾಗಿ ಮಾತನಾಡಿ, ಪರ ಹಾಗೂ ವಿರೋಧ ಎರಡೂ ಕೇಳಿ ಬರ್ತಿದೆ. ಈ ಹೊಸ ಪ್ರಯೋಗದಲ್ಲಿ ಇರುವ ಸಂಶಯಗಳನ್ನ ಸರಿಪಡಿಸಬೇಕು. ಕೆಲ ಅನುಮಾನಗಳನ್ನ ಸರಿಪಡಿಸಿಕೊಂಡ್ರೇ ಸುಗಮವಾಗಿ ಸರಿಯಾಗುತ್ತೆ ಅನ್ನೋದು ನನ್ನ ಅಭಿಪ್ರಾಯ. ಸಂಶಯಗಳನ್ನ ಸರಿಪಡಿಸೋದು ಕೇಂದ್ರ ಸರ್ಕಾರದ ಹೊಣೆ ಎಂದಿದ್ದಾರೆ.

ಇನ್ನು ಪಠ್ಯಪುಸ್ತಕ ವಾಪಸ್ ಪಡೆಯುವಂತೆ ದೇವೇಗೌಡರ ಪತ್ರ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿ ಇಬ್ಬರೂ ವಿಭಿನ್ನವಾದ ಹೇಳಿಕೆಗಳನ್ನ ನೀಡುತ್ತಿದ್ದಾರೆ. ನಾನು ಹಳೆಯ ಮತ್ತು ಹೊಸದು ಪಠ್ಯಪುಸ್ತಕಗಳನ್ನ ಓದುತ್ತೇನೆ. ಅದರ ಅಧ್ಯಾಯನದ ಬಳಿಕ ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದು ತುಮಕೂರಿನಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ‌ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!