ಸುಖಾಸುಮ್ಮನೆ ಮಾತಾಡುವ ತೆವಲು ನಂಗಿಲ್ಲ : ಸಿದ್ದರಾಮಯ್ಯ ಮೇಲೆ ಮತ್ತೆ ಗುಡುಗಿದ ಕುಮಾರಸ್ವಾಮಿ..!

1 Min Read

 

ಬೆಂಗಳೂರು: ಮಾಜಿ ಸಿಎಂ ಗಳ ನಡುವೆ ಟ್ವಿಟ್ಟರ್ ವಾಕ್ ಸಮರ ಮುಂದುವರೆದಿದೆ. ಸಿದ್ದರಾಮಯ್ಯ ಕುಮಾರಸ್ವಾಮಿ ವಿರುದ್ಧ ಗುಡುಗಿದರೆ ಕುಮಾರಸ್ವಾಮಿ ಸಿದ್ದರಾಮಯ್ಯ ಮೇಲೆ ಗುಡುಗುತ್ತಿದ್ದಾರೆ. ಇದೀಗ ಮತ್ತೆ ಟ್ವಿಟ್ಟರ್ ನಲ್ಲಿ ಕುಮಾರಸ್ವಾಮಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

” ಸ್ವಯಂ ಘೋಷಿತ ಸಂವಿಧಾನ ಪಂಡಿತ ” ಸಿದ್ದರಾಮಯ್ಯ ನಮ್ಮ ಪಕ್ಷ & ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ.

ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ?.

ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕಾರಣ? ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂಥ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ. ‘ಸುಳ್ಳಿನ ಸಿದ್ದಪುರುಷ’ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ?.

ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ. ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ! ಜತೆಗೆ ಜೆಡಿಎಸ್ ಬಗ್ಗೆ ವಿಷ ಕಾರುವುದು ಸುಳ್ಳಾ? ಅವರ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ.

ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ.

ತುಮಕೂರು ಜಿಲ್ಲೆಯಿಂದ ಓಡಿಸಿ, ಬಿಜೆಪಿಯ ಬಾಲಂಗೋಚಿ; ಇಂತಹ ನುಡಿಮುತ್ತುಗಳು ‘ಸ್ವಯಂ ಘೋಷಿತ ಸಂವಿಧಾನ ಪಂಡಿತ’ನ ರಾಜಕೀಯ ಫಜೀತಿಯ ಪರಾಕಾಷ್ಠೆ. ಯಾರ ಭಯ ಯಾರಿಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *