Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆರೋಪ

Facebook
Twitter
Telegram
WhatsApp

ಸಿಂದಗಿ: ವಿಜಯಪುರ ಜಿಲ್ಲೆಯೂ ಸೇರಿ ರಾಜ್ಯದ ಅನೇಕ ಕಡೆ ಮಟ್ಕಾ, ಬೆಟ್ಟಿಂಗ್‌ ದಂಧೆಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಅನೇಕ ಬಡ ಕುಟುಂಬಗಳು ಬೀದಿ ಪಾಲಾಗಿವೆ. ಆದರೂ ರಾಜ್ಯದ ಬಿಜೆಪಿ ಸರಕಾರ ಚಕಾರ ಎತ್ತದೇ ಮೌನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಈ ದಂಧೆಯ ಕಬಂಧ ಬಾಹುಗಳು ವಿಧಾನಸೌಧದಿಂದ ತಳಹಂತದವರೆಗೂ ವ್ಯಾಪಕವಾಗಿ ಚಾಚಿಕೊಂಡಿದ್ದು, ಸರಕಾರ ಕೈಕಟ್ಟಿ ಕೂತಿದೆ. ಬಡಕುಟುಂಬಗಳು ಇಂಥ ದಂಧೆಗಳಿಗೆ ಸಿಕ್ಕಿ ಬಲಿಯಾಗುತ್ತಿವೆ. ಆ ಕುಟುಂಬಗಳ ಮಕ್ಕಳು ಹೆಚ್ಚು ಬಡ್ಡಿಗೆ ಸಾಲ ಮಾಡಿಕೊಂಡು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ಈ ದಂಧೆ ಮಿತಿಮೀರಿ ನಡೆಯುತ್ತಿದೆ. ಹಣ ಕೊಟ್ಟು ಜಿಲ್ಲೆಗೆ ಪೋಸ್ಟಿಂಗ್‌ ಮಾಡಿಸಿಕೊಂಡು ಬಂದಿರುವ ಅಧಿಕಾರಿಗಳಿಗೆ ಮಂತ್ಲಿ ತಪ್ಪದೇ ಹೋಗುತ್ತಿದೆ. ದೊಡ್ಡದೊಂದು ಗ್ಯಾಂಗ್‌ ಜಿಲ್ಲೆಯಲ್ಲಿ ಈ ದಂಧೆಗಳನ್ನು ವ್ಯಾಪಕ ಮಟ್ಟದಲ್ಲಿ ಆಪರೇಟ್‌ ಮಾಡುತ್ತಿದ್ದು, ಜನರೇ ಬೀದಿಬೀದಿಗಳಲ್ಲಿ ನಿಂತು ಮಾತನಾಡುತ್ತಾ ಈ ಪೀಡೆಯನ್ನು ಹತ್ತಿಕ್ಕದ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ಲಾಟರಿಗಳನ್ನು ನಿಷೇಧ ಮಾಡಿದ್ದೆ. ಇಂಥ ದಂಧೆಗಳಿಗೆ ಕಠಿಣವಾಗಿ ಕಡಿವಾಣ ಹಾಕಿದ್ದೆ. ಆದರೆ, ಈಗ ಅವೆಲ್ಲ ಬೇರೆ ಬೆರೆ ರೂಪಗಳಲ್ಲಿ ಅನಧಿಕೃತವಾಗಿ ಮತ್ತೆ ಕಾಣಿಸಿಕೊಂಡಿದ್ದು, ಪೊಲೀಸ್‌ ಇಲಾಖೆ ಕುಮ್ಮಕ್ಕು ನೀಡುತ್ತಿದೆ. ದೊಡ್ಡ ದೊಡ್ಡ ಹಂತದಲ್ಲಿ ಇದರಲ್ಲಿ ಶಾಮೀಲಾಗಿದ್ದಾರೆಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!