Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನರೇಂದ್ರ ಮೋದಿಯವರ ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

Facebook
Twitter
Telegram
WhatsApp

ಸುದ್ದಿಒನ್, ಜೂ.09 : ನವದೆಹಲಿ: ಇಂದು ನೂತನ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ  ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಈಶ್ವರನ ಹೆಸರಿನಲ್ಲಿ ಪ್ರಧಾನಿ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು‌.  ರಾಷ್ಟ್ರಪತಿ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆದಿದೆ. ದ್ರೌಪದಿ ಮುರ್ಮಾ ಅವರು ಪ್ರತಿಜ್ಞಾವಿಧಿ ಬೊಧಿಸಿದ್ದಾರೆ.

https://x.com/pradeepgowdas/status/1799811962576236687?t=BIvrSI89lCM91FwHX0R0fg&s=19

ಇನ್ನು ನೂತನ ಪ್ರಧಾನ ಮಂತ್ರಿ ಮೋದಿ ಅವರ ಜೊತೆಗೆ ಹಲವು ಸಂಸದರು ಕೂಡ ಪದಗ್ರಹಣದಲ್ಲಿ ಭಾಗಿಯಾಗಿದ್ದರು‌. ಪದಗ್ರಹಣ ಸ್ವೀಕಾರ ಮಾಡಿದರು. ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡ ಮೋದಿ ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಾಗಲೇ ಕುಮಾರಸ್ವಾಮಿ ಗೆಲುವು ಕಂಡರೆ ಕೇಂದ್ರ ಸಚಿವ ಸ್ಥಾನ ಸಿಗುವ ಭರವಸರ ನೀಡಿದ್ದರು. ಇದೀಗ ಅದರಂತೆ ಕುಮಾರಸ್ವಾಮಿ ಕೇಂದ್ರದ ಮಂತ್ರಿಯಾಗಿದ್ದಾರೆ. ಯಾವ ಖಾತೆ ನೀಡುತ್ತಾರೆ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಆದರೆ ಇಂದು ಮೋದಿ ಅವರ ಜೊತೆಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ಕೇಂದ್ರದ ಮಂತ್ರಿಯಾಗಿದ್ದು, ಅವರ ಕುಟುಂಬಸ್ಥರಿಗೂ ಬಾರೀ ಸಂತದ ತಂದಿದೆ. ಇತ್ತಿಚೆಗಷ್ಟೇ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದರು. ಕೇಂದ್ರದಿಂದ ತಂದೆಯವರಿಗೆ ಸ್ಥಾನಮಾನ ಸಿಕ್ಕರೆ ನಮಗೂ ಖುಷಿ ಎಂದು. ದೆಹಲಿಗೆ ತೆರಳುವ ಮುನ್ನ ಕುಮಾರಸ್ವಾಮಿ ಅವರು ಕೂಡ ಈ ಬಗ್ಗೆ ಮಾತನಾಡಿದ್ದರು. ಕೃಷಿ ಇಲಾಖೆ ಸಿಕ್ಕರೆ ಖಂಡಿತ ಸಂತೋಷದಿಂದ ಮಾಡುತ್ತೇನೆ. ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳುತ್ತೇನೆ ಎಂದಿದ್ದರು. ಸದ್ಯಕ್ಕೆ ಮೋ್ಇ ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಯಾವ ಖಾತೆ ಎಂಬುದು ಬಳಿಕ ಗೊತ್ತಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್

ಸಿಎಂ ಪತ್ನಿ ಹೆಸರಿಗೆ 14 ಮೂಡಾ ಸೈಟ್ ಗಳು : ಸಿದ್ದರಾಮಯ್ಯ ಹೇಳಿದ್ದೇನು..?

  ಬೆಂಗಳೂರು: ಸಿಎಂ ಸಿದ್ದರಾಮಯ್ಯ ಧರ್ಮಪತ್ನಿ ಪಾರ್ವತಿ ಅವರ ಹೆಸರಿನಲ್ಲಿ 14 ಮೂಡಾ ಸೈಟುಗಳನ್ನು ಮಾಡಲಾಗಿದೆ ಎಂಬುದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಆರ್ಟಿಐ ಕಾರ್ಯಕರ್ತ ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದಿದ್ದಾರೆ. ಜೊತೆಗೆ ಸಿಎಂ

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೋಲೆ ಬಾಬಾರವರ ಸತ್ಸಂಗ

error: Content is protected !!